Select Your Language

Notifications

webdunia
webdunia
webdunia
webdunia

ರಸ್ತೆಯಲ್ಲಿ ಸಿಕ್ಕ 45 ಸಾವಿರ ರೂಪಾಯಿ ಹಿಂತಿರುಗಿಸಿದ ವ್ಯಕ್ತಿ

ರಸ್ತೆಯಲ್ಲಿ ಸಿಕ್ಕ 45 ಸಾವಿರ ರೂಪಾಯಿ ಹಿಂತಿರುಗಿಸಿದ ವ್ಯಕ್ತಿ
ಬೆಂಗಳೂರು , ಭಾನುವಾರ, 2 ಅಕ್ಟೋಬರ್ 2022 (15:42 IST)
ರಸ್ತೆಯಲ್ಲಿ ಸಿಕ್ಕ 45 ಸಾವಿರ ರೂಪಾಯಿ ಹಣವನ್ನು ಹಿಂತಿರುಗಿಸುವ ಮೂಲಕ ವ್ಯಕ್ತಿಯೊಬ್ಬರು ಮಾನವೀಯತೆ ಮೆರೆದಿರುವ ಘಟನೆ ಮಧುಗಿರಿ ತಾಲೂಕಿನ ಹೊಸಕೆರೆ ಗ್ರಾಮದಲ್ಲಿ ನಡೆದಿದೆ.
 
ಶಿವಕುಮಾರ್ ಮಾನವೀಯತೆ ಮೆರೆದ ವ್ಯಕ್ತಿ. ಇವರು ಹೊಸಕೆರೆ ಬಳಿ ಫ್ರೆಂಡ್ಸ್ ಹೆಸರಿನಲ್ಲಿ ಡಾಬ ನಡೆಸುತ್ತಿದ್ದಾರೆ.
ಬೆಳಗ್ಗೆ ಹೊಸಕೆರೆ ಗ್ರಾಮದ ದರ್ಶನ್ ಎಂಬ ಯುವಕ ಬೈಕ್​ನಲ್ಲಿ ತೆರಳುವಾಗ 45 ಸಾವಿರ ರೂಪಾಯಿ ಹಣವನ್ನು ರಸ್ತೆಯಲ್ಲಿ ಬಿಳಿಸಿಕೊಂಡು ಹೋಗಿದ್ದರು. ಅದೇ ರಸ್ತೆಯಲ್ಲಿ ಬಂದ ಶಿವಕುಮಾರ್​ಗೆ ಹಣ ಸಿಕ್ಕಿತ್ತು.
 
ಹಣ ಸಿಕ್ಕಿದ್ದರ ಬಗ್ಗೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶಿವಕುಮಾರ್​ ಹರಿಬಿಟ್ಟಿದ್ದರು. ಹಣ ಕಳೆದುಕೊಂಡವರು ನನ್ನ ನಂಬರ್​ಗೆ ಕರೆ ಮಾಡಿ ನಿಮ್ಮ ಹಣ ಪಡೆದುಕೊಳ್ಳಿ ಎಂದಿದ್ದರು. ವಿಡಿಯೋ ನೋಡಿದ್ದ ದರ್ಶನ್​, ಶಿವಕುಮಾರ್​ಗೆ ಕರೆ ಮಾಡಿ ಮಾಹಿತಿ ಪಡೆದು, ಅವರ ಬಳಿ ಹೋಗಿ ಹಣ ಸಂಗ್ರಹಿಸಿಕೊಂಡು ಬಂದಿದ್ದಾರೆ.
 
ಇದೀಗ ಶಿವಕುಮಾರ್​ ಮಾನವೀಯತೆ ತುಮಕೂರಿನ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಾಂಧಿ ಜಯಂತಿ ದಿನ ನಕಲಿ ಗಾಂಧಿ ಬಗ್ಗೆ ಮಾತನಾಡುವುದಿಲ್ಲ