Webdunia - Bharat's app for daily news and videos

Install App

49 ಕೋಟಿ ಕಡತ ನಾಪತ್ತೆ ಪ್ರಕರಣ: ನಕಲಿ ಸಹಿ ಬಳಸಿ ಲಪಟಾಯಿಸಿದ್ದ ಅಧಿಕಾರಿಗಳು...?!

Webdunia
ಶುಕ್ರವಾರ, 19 ಡಿಸೆಂಬರ್ 2014 (15:46 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಸುಮಾರು 49ಕೋಟಿ ಮೊತ್ತದ ದಾಖಲೆಗಳಿದ್ದ ಕಡತವೊಂದು ಮಾಯವಾಗಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಪ್ರಸ್ತುತ ಈ ಪ್ರಕರಣ ಮತ್ತೊಂದು ತಿರುವನ್ನು ಪಡೆದಿದ್ದು, ಕಡತಕ್ಕೆ ಕೆಳ ಹಂತದ ಅಧಿಕಾರಿಗಳೇ ಉನ್ನತಾಧಿಕಾರಿಗಳ ನಕಲಿ ಸಹಿ ಬಳಸಿ ಪಾಲಿಕೆಗೆ ವಂಚಿಸಿದ್ದಾರೆ ಎಂದು ತಿಳಿದು ಬಂದಿದೆ. 
 
ಈ ಬಗ್ಗೆ ಪಾಲಿಕೆಯ ಆಯುಕ್ತರು ಈಗಾಗಲೇ ಕ್ರಮ ಕೈಗೊಳ್ಳಲು ಮುಂದಾಗಿದ್ದು, ತನಿಖೆಗಾಗಿ ಜಾಗೃತ ದಳಕ್ಕೆ ವಹಿಸಲು ಮುಂದಾಗಿದ್ದಾರೆ. ಆದರೆ ಈ ಬಗ್ಗೆ ಜಾಗೃತ ದಳದ ಮುಖ್ಯಸ್ಥ ಎಸ್.ಪ್ರಭಾಕರ್ ಮಾತನಾಡಿದ್ದು, ತನಿಖೆ ನಡೆಸಲು ನಾವು ಸಿದ್ಧರಿದ್ದೇವೆ. ಆದರೆ ಇಲಾಖೆಯಲ್ಲಿ ತನಿಖೆಗೆ ಅಗತ್ಯವಾದಷ್ಟು ಸಿಬ್ಬಂದಿ ಇಲ್ಲದ ಕಾರಣ ತನಿಖೆ ನಡೆಸಲು ಸಾಧ್ಯವಿಲ್ಲ ಎಂದಿದ್ದಾರೆ. 
 
ಇನ್ನು ಪ್ರಕರಣ ಸಂಬಂಧ ಪಾಲಿಕೆ ಪೌರಾಯುಕ್ತೆ ಶಾಂತಕುಮಾರಿ ಪ್ರತಿಕ್ರಿಯಿಸಿದ್ದು, ನಗರ ಪೊಲೀಸರು ಈ ಸಂಬಂಧ ದೂರನ್ನು ದಾಖಲಿಸಿಕೊಂಡು ತನಿಖೆ ನಡೆಸಲು ಹಿಂಜರಿಯುತ್ತಿದ್ದಾರೆ. ಅಲ್ಲದೆ ಜಾಗೃತ ದಳಕ್ಕೆ ವಹಿಸೋಣ ಎಂದರೆ ಅಲ್ಲಿ ಸಿಬ್ಬಂದಿಯ ಕೊರತೆ ಇದೆಯಂತೆ. ಹಾಗಾಗಿ ಈ ಪ್ರಕರಣದ ತನಿಖೆ ವಿಷಯ ಹಳ್ಳ ಹಿಡಿಯುತ್ತಿದ್ದು, ನೇರವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲು ಮುಂದಾಗಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ. 
 
ಕಡತ ನಾಪತ್ತೆ ಬಗ್ಗೆ ಎನ್.ಆರ್.ರಮೇಶ್ ಎಂಬುವವರು ಆರೋಪಿಸಿದ್ದರು. ಇತ್ತೀಚೆಗೆ ಮಾಧ್ಯಮಗಳಲ್ಲಿಯೂ ಕೂಡ ಬಹಳ ಸುದ್ದಿ ಮಾಡಿತ್ತು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments