ಬೆಂಗಳೂರಿನಲ್ಲಿ 40 ವರ್ಷಗಳಿಂದ ಅತಿಕ್ರಮಿಸಿದ್ದ ಜಮೀನು ವಶ!

Webdunia
ಶುಕ್ರವಾರ, 6 ಆಗಸ್ಟ್ 2021 (18:41 IST)

ಬೆಂಗಳೂರು: ಸುಮಾರು 40 ವರ್ಷಗಳಿಂದ ಅತಿಕ್ರಮಿಸಿಕೊಂಡು ತಾಂತ್ರಿಕ ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿದ್ದ, ಇಸ್ಲಾಮಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಟ್ಟಡ ಸೇರಿದಂತೆ ಒಟ್ಟು 3.20 ಎಕರೆ ಭೂಮಿಯನ್ನು ಇಂದು ಸ

ರ್ಕಾರದ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು.

ಸರ್ಕಾದ ಆದೇಶದಂತೆ ತಮ್ಮ ನೇತೃತ್ವದಲ್ಲಿ ಜಾರಿದಳದ ವಿಶೇಷ ಜಿಲ್ಲಾಧಿಕಾರಿ ದುರ್ಗಾಶ್ರೀ, ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿ ಡಾ. ಶಿವಣ್ಣ, ತಹಸೀಲ್ದಾರ್ ರಮಲಕ್ಷ್ಮಯ್ಯ ಅವರ ತಂಡವು ಕಾರ್ಯಾಚರಣೆ ನಡೆಸಿದ್ದು, ಬೆಂಗಳೂರು ದಕ್ಷಿಣ ತಾಲ್ಲೂಕಿನ, ಬೇಗೂರು ಹೋಬಳಿಯಲ್ಲಿರುವ ಹುಳಿಮಾವು ಗ್ರಾಮದ ಸರ್ವೆ ನಂ. 63 ರಲ್ಲಿದ್ದ ಸುಮಾರು 37.00 ಕೋಟಿ ರೂ. ಬೆಲೆ ಬಾಳುವ ಆಸ್ತಿಯನ್ನು ಸರ್ಕಾರದ ಸಪರ್ದಿಗೆ ಪಡೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಅಕ್ರಮವಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು, ಶಿಕ್ಷಣ ಸಂಸ್ಥೆಯನ್ನು ನಡೆಸಿದ್ದಲ್ಲದೇ, ಸಂಸ್ಥೆಯು ಈ ಹಿಂದೆ ಜಮೀನನ್ನು ಗುತ್ತಿಗೆ ಅಥವಾ ಮಂಜೂರಿ ಮಾಡಿಕೊಡಲು ಕೋರಿ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸುತ್ತಾ ಬಂದಿತ್ತು. ಸರ್ಕಾರವು ಈ ಮನವಿಗಳನ್ನು 2010 ರಲ್ಲೆ ತಿರಸ್ಕರಿಸಿದ್ದು, ಜಮೀನನ್ನು ಸರ್ಕಾರದ ಸುಪರ್ದಿಗೆ ಪಡೆದುಕೊಳ್ಳಲು ಸೂಚಿಸಿತ್ತು.

ಸಂಸ್ಥೆಯು ವಿವಿಧ ನ್ಯಾಯಾಲಯಗಳಲ್ಲಿ ಈ ಕುರಿತು ಮೇಲ್ಮನವಿ ಸಲ್ಲಿಸಿ ಅವುಗಳನ್ನು ಮಾನ್ಯ ನ್ಯಾಯಾಲಯದಿಂದ ತಿರಸ್ಕರಿಸಲಾಗಿತ್ತು. ನಂತರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಮೇಲ್ಮನವಿಯನ್ನೂ ಕೂಡ ತಿರಸ್ಕರಿಸಲಾಗಿದೆ ಎಂದು ಅವರು ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮುಂದಿನ ಸುದ್ದಿ
Show comments