Webdunia - Bharat's app for daily news and videos

Install App

ಅಗಸರು, ಕ್ಷೌರಿಕರಿಗೆ ಸರಕಾರದಿಂದ 5,000 ರೂ. ಪರಿಹಾರ

Webdunia
ಮಂಗಳವಾರ, 16 ಜೂನ್ 2020 (19:53 IST)
ಅಗಸರು ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ಕಾರ್ಮಿಕರಿಗೆ ಒಂದು ಬಾರಿ 5000 ರೂ.ಗಳ ಪರಿಹಾರವನ್ನು ಸರಕಾರ ವಿತರಿಸುತ್ತಿದೆ.

ಕೊರೋನಾ ವೈರಸ್ (ಕೋವಿಡ್-19)ರ ಲಾಕ್‍ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಅಗಸರು ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ಕಾರ್ಮಿಕರಿಗೆ ಒಂದು ಬಾರಿ 5000 ರೂ.ಗಳ ಪರಿಹಾರ ವಿತರಿಸಲಾಗುತ್ತಿದೆ. ಇದಕ್ಕಾಗಿ ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಉಪವಿಭಾಗದ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.

 ಅಗಸ, ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್‍ನಲ್ಲಿ ಅನ್‍ಲೈನ್ ಅರ್ಜಿ ಸಲ್ಲಿಸಬೇಕು. ನಂತರ ಫಲಾನುಭವಿಗಳ ಅರ್ಜಿ ಪರಿಶೀಲಿಸಿ ಆಧಾರ ಸಂಖ್ಯೆಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಡಿ.ಬಿ.ಟಿ. ಮೂಲಕ ಪರಿಹಾರವನ್ನು ವರ್ಗಾಯಿಸಲಾಗುತ್ತದೆ. 

ಕರ್ನಾಟಕದಲ್ಲಿ ಅಗಸ ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ವಲಸೆ ಕಾರ್ಮಿಕರು (ಕುಟುಂಬದಲ್ಲಿ ಒಬ್ಬರಿಗೆ ಮಾತ್ರ)  ಪರಿಹಾರ ಪಡೆಯಲು ಅರ್ಹರು. ಫಲಾನುಭವಿಗಳ ವಯೋಮಿತಿ 18 ರಿಂದ 65 ವರ್ಷದೊಳಗಿರಬೇಕು. ಕರ್ನಾಟಕ ರಾಜ್ಯದಲ್ಲಿ ಬಿ.ಪಿ.ಎಲ್. ಕಾರ್ಡ್ ಹೊಂದಿರಬೇಕು. ಕಡ್ಡಾಯವಾಗಿ ಆಧಾರ್ ಸಂಖ್ಯೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಹೊಂದಿರಬೇಕು.

ಫಲಾನುಭವಿಗಳು ಪೂರಕ ದಾಖಲೆಗಳಾದ ಅಗಸ, ಕ್ಷೌರಿಕ ವೃತ್ತಿ ನಿರ್ವಹಿಸುತ್ತಿರುವ ಕುರಿತು ನಿಗದಿತ ನಮೂನೆಯಲ್ಲಿ ಅಧಿಕಾರಿಗಳಿಂದ ಪಡೆದ ಉದ್ಯೋಗ ಧೃಡಿಕರಣ ಪತ್ರ, ನಿಗದಿತ ನಮೂನೆಯಲ್ಲಿ ಸ್ವಯಂ ಘೋಷಣೆ, ಬಿ.ಪಿ.ಎಲ್ ಕಾರ್ಡ್, ಆಧಾರ್ ಕಾರ್ಡ್, ಜನ್ಮ ದಿನಾಂಕ ದಾಖಲೆ ಹಾಗೂ ಪಾಸ್ ಪೋರ್ಟ್ ಅಳತೆ ಇತ್ತೀಚಿನ ಭಾವಚಿತ್ರದೊಂದಿಗೆ ಆನ್‍ಲೈನ್ ಮೂಲಕ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments