Webdunia - Bharat's app for daily news and videos

Install App

ಮಾಜಿ ಪತ್ನಿಗೆ ₹5,473 ಕೋಟಿ ಜೀವನಾಂಶ: ದುಬೈ ದೊರೆಗೆ ಬ್ರಿಟನ್ ಕೋರ್ಟ್ ಆದೇಶ

Webdunia
ಬುಧವಾರ, 22 ಡಿಸೆಂಬರ್ 2021 (20:26 IST)
ತಮ್ಮ ಮಾಜಿ ಪತ್ನಿ ಮತ್ತು ಮಕ್ಕಳಿಗೆ 550 ಮಿಲಿಯನ್ ಪೌಂಡ್ಸ್ (ಸುಮಾರು ₹5,473 ಕೋಟಿ) ಜೀವನಾಂಶ ಪಾವತಿಸುವಂತೆ ದುಬೈ ದೊರೆಗೆ ಬ್ರಿಟನ್ನಿನ ನ್ಯಾಯಾಲಯ ಆದೇಶಿಸಿದೆ. ಇದು ಬ್ರಿಟನ್ನಿನ ಅತ್ಯಂತ ದುಬಾರಿ ವಿಚ್ಛೇದನಾ ಎನ್ನಲಾಗಿದೆ.
ದುಬೈ ದೊರೆ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕಟೌಮ್ ಅವರು ತಮ್ಮ ವಿಚ್ಛೇದಿತ 6ನೇ ಪತ್ನಿ ಹಯಾ ಬಿಂಟ್ ಅಲ್ ಹುಸೇನ್‌ ಅವರಿಗೆ 251.5 ಮಿಲಿಯನ್ ಪೌಂಡ್ ಮತ್ತು ಅವರ ಮಕ್ಕಳಾದ ಅಲ್ ಜಲೀಲಾ(14), ಮತ್ತು ಜಾಯೆದ್( 9) ಅವರಿಗೆ 290 ಮಿಲಿಯನ್ ಪೌಂಡ್‌ಗಳ ಬ್ಯಾಂಕ್ ಗ್ಯಾರಂಟಿ ನೀಡುವಂತೆ ಆದೇಶಿಸಲಾಗಿದೆ.
ಮಕ್ಕಳು ಎಷ್ಟು ಕಾಲ ಬದುಕುತ್ತಾರೆ ಮತ್ತು ಅವರು ತಮ್ಮ ತಂದೆಯೊಂದಿಗೆ ರಾಜಿ ಮಾಡಿಕೊಳ್ಳುತ್ತಾರೆಯೇ ಎಂಬ ಅಂಶವನ್ನು ಅವಲಂಬಿಸಿ ಅವರು ಪಡೆಯುವ ಜೀವನಾಂಶದ ಒಟ್ಟು ಮೊತ್ತವು 290 ಮಿಲಿಯನ್ ಪೌಂಡ್‌ಗಳಿಗಿಂತ ಹೆಚ್ಚು ಅಥವಾ ಕಡಿಮೆ ಆಗಿರುತ್ತದೆ. ಮಕ್ಕಳು ಅಪ್ರಾಪ್ತರಾಗಿರುವಾಗ ಅವರ ಭದ್ರತಾ ವೆಚ್ಚಗಳನ್ನು ಭರಿಸಲು ವರ್ಷಕ್ಕೆ 11 ಮಿಲಿಯನ್ ಪೌಂಡ್‌ಗಳನ್ನೂ ಇದು ಒಳಗೊಂಡಿದೆ.
ಈ ಕುಟುಂಬಕ್ಕೆ ವಿಶಿಷ್ಟವಾದ ಕಠಿಣ ಭದ್ರತೆ ಅಗತ್ಯವಿದೆ. ಬೇರೆ ಯಾರಿಂದಲೂ ಅಲ್ಲ. ಅವರ ತಂದೆ ಶೇಖ್ ಮೊಹಮ್ಮದ್ ಅವರಿಂದಲೇ ಅವರಿಗೆ ಅಪಾಯ ಇದೆ ಎಂದು ನ್ಯಾಯಾಧೀಶ ಫಿಲಿಪ್ ಮೂರ್ ಹೇಳಿದ್ದಾರೆ.
2019ರಲ್ಲಿ ಹಯಾ ಅವರು ಪತಿಯನ್ನು ತೊರೆದು ಬ್ರಿಟನ್‌ಗೆ ತೆರಳಿದ್ದರು. ಬ್ರಿಟಿಷ್ ನ್ಯಾಯಾಲಯದ ಮೂಲಕ ಮಕ್ಕಳನ್ನು ಕಸ್ಟಡಿಗೆ ನೀಡುವಂತೆ ಕೋರಿದ್ದರು. ಜೋರ್ಡಾನ್‌ನ ದಿವಂಗತ ಕಿಂಗ್ ಹುಸೇನ್ ಅವರ ಪುತ್ರಿಯಾಗಿರುವ ಹಯಾ, ತನ್ನ ಪತಿಯಿಂದ 'ಭಯಭೀತಳಾಗಿದ್ದೇನೆ' ಎಂದು ಹೇಳಿದ್ದರು. ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಗಲ್ಫ್ ಎಮಿರೇಟ್‌ಗೆ ಬಲವಂತವಾಗಿ ಹಿಂದಿರುಗಲು ಆದೇಶಿಸಿದ್ದಾರೆ ಎಂದು ಆರೋಪಿಸಿದ್ದರು.
ಶೇಖ್ ಮೊಹಮ್ಮದ್ (72), ಯುನೈಟೆಡ್ ಅರಬ್ ಎಮಿರೇಟ್ಸ್‌ನ ಉಪಾಧ್ಯಕ್ಷ ಮತ್ತು ಪ್ರಧಾನ ಮಂತ್ರಿಯಾಗಿದ್ದು, ಪ್ರಮುಖ ಕುದುರೆ ತಳಿಗಾರ. ಬ್ರಿಟನ್ನಿನ ರಾಣಿ ಎಲಿಜಬೆತ್-II ಅವರೊಂದಿಗೆ ಉತ್ತಮ ಸ್ನೇಹ ಸಂಬಂಧ ಹೊಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments