ಸಾಲ ಕೊಡಿಸೋದಾಗಿ ನಂಬಿಸಿ 5.85 ಕೋಟಿ ರೂ. ಮೋಸ!

Webdunia
ಮಂಗಳವಾರ, 28 ಡಿಸೆಂಬರ್ 2021 (08:35 IST)
ಬೆಂಗಳೂರು : ಕಡಿಮೆ ಬಡ್ಡಿ ದರದಲ್ಲಿ 400 ಕೋಟಿ ರೂ. ಸಾಲ ಕೊಡಿಸುವುದಾಗಿ ನಂಬಿಸಿ ಇಬ್ಬರು ಉದ್ಯಮಿಗಳಿಂದ ಮುಂಗಡವಾಗಿ 5.85 ಕೋಟಿ ರೂ. ಬಡ್ಡಿ ಪಡೆದು ವಂಚಿಸಿದ್ದ ಐದು ಮಂದಿ ಆರೋಪಿಗಳನ್ನು ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.
 

ಕೇರಳ ಮೂಲದ ಸೈಯ್ಯದ್ ಇಬ್ರಾಹಿಂ ಅಲಿಯಾಸ್ ಡ್ಯಾನಿಯಲ್ ಆರ್ಮ್ಸ್ಟ್ರಾಂಗ್, ಕೊಯಮತ್ತೂರಿನ ವಿವೇಕ್ ಅಲಿಯಾಸ್ ವಿಕ್ಕಿ ಅಲಿಯಾಸ್ ವಿವೇಕಾನಂದ, ಕ್ರಿಸ್ಟೋಫರ್ ಅಲಿಯಾಸ್ ರಾಘವನ್, ರಘುವರನ್ ಅಲಿಯಾಸ್ ರಘು, ಶಿವರಾಮನ್ ಅಲಿಯಾಸ್ ನಾಗರಾಜು ಬಂಧಿತರು.

ಆರೋಪಿಗಳಿಂದ 4.10 ಕೋಟಿ ರೂ. ಮೌಲ್ಯದ 8 ಕೆ.ಜಿ 215 ಗ್ರಾಂ ಚಿನ್ನಾಭರಣ, 35 ಲಕ್ಷ ರೂ. ಬೆಲೆ ಬಾಳುವ ಬಿಎಂಡಬ್ಲ್ಯು ಕಾರು, 10 ಲಕ್ಷ ರೂ. ಗಳ ಎರ್ಟಿಗಾ, 36.60 ಲಕ್ಷ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ. 1.86 ಲಕ್ಷ ರೂ. ಫ್ರೀಜ್ ಮಾಡಲಾಗಿದೆ.

45 ಲಕ್ಷ ರೂ.ಗಳನ್ನು ಆರೋಪಿಗಳು ಖರ್ಚು ಮಾಡಿದ್ದಾರೆ. ಚಿನ್ನ ಖರೀದಿಗೆ ಸಂಬಂಧಿಸಿದಂತೆ 33 ಲಕ್ಷ ರೂ. ಜಿಎಸ್ಟಿ ಹಾಗೂ ಸಿಎಸ್ಟಿ ಪಾವತಿಸಿದ್ದಾರೆ ಎಂದು ಪೊಲೀಸರು ತಿಳಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments