ಗೋ ಪೂಜೆ ದಿನವೇ 5 ಹಸುಗಳ ಸಾವು

Webdunia
ಗುರುವಾರ, 27 ಅಕ್ಟೋಬರ್ 2022 (19:05 IST)
ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ನಿನ್ನೆ ಗೋವುಗಳ ಪೂಜೆ ಮಾಡಲಾಗಿದೆ. ಆದರೆ ಗೋ ಪೂಜೆ ದಿನವೇ ಹಾಲು ಕೊಡುವ ಹಸುಗಳು ಸಾಲು ಸಾಲು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ತಾಲ್ಲೂಕಿನ ಸುಳುಗೋಡು ಗ್ರಾಮ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಹಾಲು ಕೊಡುವ 3 ಹಸುಗಳು ಸುಳುಗೋಡು ಮಾಳವಿಕ ಮಹೇಶ್ ಎಂಬುವವರ ಮನೆಯಲ್ಲಿ ಎರಡು ದಿನಗಳ ಹಿಂದೆ ಅಸುನೀಗಿವೆ. ಆದರೆ ಹಸುಗಳು ಇದ್ದಕ್ಕಿದ್ದಂತೆ ಸಾವನ್ನಪ್ಪಿದ್ದು, ಇವುಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಹೇಶ್ ಕುಟುಂಬ ಹಾಲು ಮಾರಿಕೊಂಡು ಜೀವನ ನಡೆಸುತ್ತಿದ್ರು, ಗೋ ಪೂಜೆ ದಿನವೇ 5 ಹಸುಗಳು ಸಾವನ್ನಪ್ಪಿದ್ದು, ಇನ್ನೆರೆಡು ಹಸುಗಳು ಜೀವನ್ಮರಣ ಸ್ಥಿತಿಯಲ್ಲಿವೆ. ಇದರಿಂದ ಮಹೇಶ್ ಕುಟುಂಬ ಆತಂಕಕ್ಕೊಳಗಾಗಿದೆ. ವಿಷಯ ತಿಳಿಯುತ್ತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗ್ರಾಮಸ್ಥರು ಶೀಘ್ರವೇ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments