ಗಣಪತಿ ವಿಸರ್ಜನೆ ಮುಗಿಸಿ ಟ್ರಾಕ್ಟರ್ನಲ್ಲಿ ಮರಳುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶವಾಗಿ 5 ಮಂದಿ ಯುವಕರು ದುರ್ಮರಣವನ್ನಪ್ಪಿ ಹಲವರು ಗಾಯಗೊಂಡ ಘಟನೆ ದೊಡ್ಡಬಳ್ಳಾಪುರದ ಚಿಕ್ಕ ಮಧುರೆ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರನ್ನು ನಾಗೇಶ್, ದರ್ಶನ್, ಅಂಜನ್, ಪವನ್, ಅರುಣ್ ಎಂದು ಗುರುತಿಸಲಾಗಿದ್ದು, ಅವರೆಲ್ಲೂ 20 ರಿಂದ 25 ವರ್ಷದ ಒಳಗಿನವರಾಗಿದ್ದಾರೆ.
ಕಳೆದ ರಾತ್ರಿ 1 ಗಂಟೆ ಸುಮಾರಿಗೆ ಗಣೇಶ ವಿಸರ್ಜನೆ ಮುಗಿಸಿ ಹಿಂತಿಗುತ್ತಿದ್ದಾಗ ಈ ಘಟನೆ ನಡೆದಿದ್ದು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ದೊಡ್ಡ ಬೆಳವಂಗಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆ ನಡೆಸುತ್ತಿದ್ದಾರೆ.