Select Your Language

Notifications

webdunia
webdunia
webdunia
webdunia

ಹೃದಯ ವಿದ್ರಾವಕ: ಒಂದೇ ಕುಟುಂಬದ ಐವರ ದುರ್ಮರಣ

ಹೃದಯ ವಿದ್ರಾವಕ
ನೆಲಮಂಗಲ , ಸೋಮವಾರ, 20 ಜೂನ್ 2016 (08:23 IST)
ನಿಂತಿದ್ದ ಕಂಟೈನರ್‌ ಲಾರಿಗೆ ಕಾರ್ ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ದುರ್ಮರಣವನ್ನಪ್ಪಿದ ಹೃದಯವಿದ್ರಾವಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನೆಲಮಂಗಲದ ಕೆಂಗಲ್ ಕೆಂಪೋನಹಳ್ಳಿ ಗೇಟ್ ಬಳಿ ನಡೆದಿದೆ. ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
 
ಮೃತರೆಲ್ಲರೂ ಹುಬ್ಬಳ್ಳಿಯ ನರಗುಂದದವರೆಂದು ಹೇಳಲಾಗುತ್ತಿದ್ದು ಕಾರು ತುಮಕೂರಿನಿಂದ ಬೆಂಗಳೂರಿನ ಕಡೆಗೆ ಬರುತ್ತಿತ್ತು. ರಾತ್ರಿ ಎಲ್ಲ ನಿದ್ದೆಗೆಟ್ಟಿದ್ದರಿಂದ ಚಾಲಕ ನಿದ್ದೆ ಮಂಪರಿನಲ್ಲಿ ಕಾರ್‌ನ್ನು ಕಂಟೇನರ್‌ಗೆ ಡಿಕ್ಕಿ ಹೊಡೆಸಿರಬಹುದು ಎಂದು ಹೇಳಲಾಗುತ್ತಿದೆ.
 
ಗಾಯಗೊಂಡವರಲ್ಲಿ ಒಬ್ಬರಿಗೆ ತಲೆಗೆ, ಮತ್ತೊಬ್ಬರ ಕಾಲಿಗೆ ತೀವ್ರ ಗಾಯವಾಗಿದೆ ಎಂದು ತಿಳಿದು ಬಂದಿದೆ. 
 
ಘಟನೆಯಿಂದ ಬೆಂಗಳೂರು- ತುಮಕೂರು ರಸ್ತೆ ಸಂಚಾರ ಅಸ್ತವ್ಯಸ್ಥವಾಗಿದೆ.
 
ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಲ್ಲಿಕಾರ್ಜುನ್ ಖರ್ಗೆ, ಸಿದ್ದರಾಮಯ್ಯ ಮ್ಯಾಚ್ ಫಿಕ್ಸಿಂಗ್: ಸಮಾನ ಮನಸ್ಕ ಶಾಸಕರ ವೇದಿಕೆ