Select Your Language

Notifications

webdunia
webdunia
webdunia
webdunia

ಆನೆ ದಾಳಿಗೆ ಬಲಿಯಾದ ಮಹಿಳೆ ಕುಟುಂಬಕ್ಕೆ 5 ಲಕ್ಷ ಪರಿಹಾರ

ಆನೆ ದಾಳಿಗೆ ಬಲಿಯಾದ ಮಹಿಳೆ ಕುಟುಂಬಕ್ಕೆ 5 ಲಕ್ಷ ಪರಿಹಾರ
ಚಾಮರಾಜನಗರ , ಭಾನುವಾರ, 20 ಜನವರಿ 2019 (22:10 IST)
ಆನೆ ದಾಳಿಯಿಂದ ಸಾವನ್ನಪ್ಪಿದ ಮಹಿಳೆಯ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಲಾಗಿದೆ.
ಮೃತ ಮಹಿಳಾ ಕುಟುಂಬಕ್ಕೆ ಐದು ಲಕ್ಷ ಪರಿಹಾರ ಘೋಷಣೆಯನ್ನು ಅರಣ್ಯ ಇಲಾಖೆಯ ಅಧಿಕಾರಿ ಡಿಸಿಎಫ್ ಶಂಕರ್ ಮಾಡಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಆನೆ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಘಟನೆಯಿಂದ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಕುಟುಂಬದ ಒಬ್ಬರಿಗೆ ತಾತ್ಕಲಿಕ ಹುದ್ದೆಕೊಡುವ ಭರವಸೆಯನ್ನೂ ಅಧಿಕಾರಿಗಳು ನೀಡಿದ್ದಾರೆ. ಆನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಘಟನಾ ಸ್ಥಳಕ್ಕೆ ಸಂಸದ ಆರ್. ದೃವನಾರಾಯಣ್  ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಮೃತರ ಕುಟುಂಬಕ್ಕೆ ಸಾಂತ್ವನವನ್ನು ಸಂಸದರು ಹೇಳಿದರು.

ಪರಿಹಾರದ ಜೊತೆಗೆ ಮುಖ್ಯಮಂತ್ರಿಗಳ ಮತ್ತು ಪ್ರಧಾನ‌ ಮಂತ್ರಿಗಳ ಸಹಾಯ ಧನ ಕೊಡುವಂತೆ ಮನವಿ ಮಾಡಲಾಗುತ್ತದೆ ಎಂದರು. ಮತ್ತೆ ಇಂತಹ ಘಟನೆಗಳು ಜರುಗದಂತಎ ಮುನ್ನೆಚ್ಚರಿಕಾ ಕ್ರಮಗಳನ್ನು  ತೆಗೆದುಕೊಳ್ಳುವಂತೆ ಅರಣ್ಯ ಅಧಿಕಾರಿಗೆ ಸಂಸದರು ಸೂಚನೆ ನೀಡಿದರು.

 

Share this Story:

Follow Webdunia kannada

ಮುಂದಿನ ಸುದ್ದಿ

ಮಕ್ಕಳಿಂದ ಬೀದಿಗೆ ಬಿದ್ದ ಮಹಿಳೆಗೆ ನಟ ಶ್ರೀಮುರುಳಿ ಮಾಡಿದ್ದೇನು?