Webdunia - Bharat's app for daily news and videos

Install App

ನೆರೆಯಲ್ಲಿ ಮನೆ ಕಳಕೊಂಡವರಿಗೆ 5 ಲಕ್ಷ ರು

Webdunia
ಶನಿವಾರ, 14 ಆಗಸ್ಟ್ 2021 (08:03 IST)
ಬೆಂಗಳೂರು (ಆ.14):  ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜುಲೈನಲ್ಲಿ ಉಂಟಾದ ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ, ದುರಸ್ತಿ ಕಾರ್ಯ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರ ನೀಡುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಭಾಗಶಃ ಅಥವಾ ಸಂಪೂರ್ಣ ಹಾನಿಗೊಂಡ ಮನೆಗಳಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಮಾರ್ಗಸೂಚಿ ಅನ್ವಯ ನೀಡಬೇಕಿದ್ದ 95,100 ರು. ಬದಲಿಗೆ ರಾಜ್ಯದಿಂದ ಹೆಚ್ಚುವರಿಯಾಗಿ 4,04,900 ರು. ಸೇರಿಸಿ 5 ಲಕ್ಷ ರು. ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದೆ.
ಜುಲೈನಲ್ಲಿ ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳನ್ನು ಪ್ರವಾಹಪೀಡಿತ ತಾಲೂಕು ಎಂದು ಘೋಷಿಸಲಾಗಿತ್ತು. ಈ ವ್ಯಾಪ್ತಿಯಲ್ಲಿ ಮನೆ ಹಾನಿ, ಮನೆಗಳಲ್ಲಿನ ಗೃಹೋಪಯೋಗಿ ವಸ್ತುಗಳು ಹಾನಿಯಾಗಿರುವ ನೆರೆ ಸಂತ್ರಸ್ತರಿಗೆ ಪರಿಹಾರವನ್ನು ಕೇಂದ್ರ ಸರ್ಕಾರದ ಎಸ್ಡಿಆರ್ಎಫ್, ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ನೀಡಲಾಗುತ್ತಿತ್ತು. ಆಗಸ್ಟ್ 12ರಂದು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರವು ಪರಿಷ್ಕೃತ ಪರಿಹಾರ ದರ ಪಟ್ಟಪ್ರಕಟಿಸಿದೆ.
ಪರಿಷ್ಕೃತ ಪರಿಹಾರ ದರ:  ಪ್ರವಾಹ ನೀರು ನುಗ್ಗಿರುವ ಮನೆಗಳ ಗೃಹೋಪಯೋಗಿ ವಸ್ತು, ಬಟ್ಟೆ-ಬರೆ ಹಾನಿಗೆ 3,800 ರು. ಇರುವ ಮಾರ್ಗಸೂಚಿ ದರದ ಬದಲಿಗೆ 10 ಸಾವಿರು ರು. ನೀಡಲಾಗುವುದು. ಶೇ.75ಕ್ಕಿಂತ ಹೆಚ್ಚು (ಸಂಪೂರ್ಣ) ಹಾನಿಯಾಗಿರುವ ಮನೆಗಳಿಗೆ 95,100 ರು. ಪರಿಹಾರ ನೀಡಲಾಗುತ್ತಿತ್ತು. ಈ ಮೊತ್ತವನ್ನು 5 ಲಕ್ಷ ರು.ಗಳಿಗೆ ಪರಿಷ್ಕರಣೆ ಮಾಡಲಾಗಿದೆ. ಶೇ.25ರಿಂದ ಶೇ.75ರಷ್ಟುತೀವ್ರ ಹಾನಿಯಾಗಿರುವ (ಕೆಡವಿ ಪುನರ್ನಿರ್ಮಾಣ ಮಾಡಬೇಕಿರುವ) ಮನೆಗಳಿಗೆ 95,100 ರು. ಬದಲಿಗೆ 5 ಲಕ್ಷ ರು., ಶೇ.25ರಿಂದ ಶೇ.75ರಷ್ಟುತೀವ್ರ ಹಾನಿಯಾಗಿದ್ದರೂ ದುರಸ್ತಿ ಮಾಡಬಹುದಾದ ಮನೆಗೆ 95,100 ರು.ಗಳಿದ್ದ ಪರಿಹಾರವನ್ನು 3 ಲಕ್ಷ ರು.ಗಳಿಗೆ ಪರಿಷ್ಕರಣೆ ಮಾಡಲಾಗಿದೆ.
ಇನ್ನು ಶೇ.15ರಿಂದ 25ರಷ್ಟುಭಾಗಶಃ ಮನೆ ಹಾನಿಗೆ 5,200 ರು.ಗಳಿದ್ದ ಪರಿಹಾರವನ್ನು 50 ಸಾವಿರ ರು.ಗಳಿಗೆ ಹೆಚ್ಚಿಸಲಾಗಿದೆ. ಪರಿಷ್ಕೃತ ಹೆಚ್ಚುವರಿ ಮೊತ್ತವನ್ನು ರಾಜ್ಯ ಸರ್ಕಾರ ಪಾವತಿಸಲಿದ್ದು, ಜಿಲ್ಲಾ ವಿಪತ್ತು ಪರಿಹಾರ ನಿಧಿಯಡಿ ಪರಿಹಾರವನ್ನು ಒದಗಿಸಲಾಗುವುದು ಎಂದು ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಮತ್ತು ಸೇವೆಗಳ ಇಲಾಖೆ ಆದೇಶದಲ್ಲಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments