Webdunia - Bharat's app for daily news and videos

Install App

ಶಿಕ್ಷಣದಿಂದ 5 ಸಾವಿರ ಮಕ್ಕಳು ಡ್ರಾಪ್​ಔಟ್​!

Webdunia
ಶನಿವಾರ, 20 ಆಗಸ್ಟ್ 2022 (14:00 IST)
ಕೊರೋನಾ ಶೈಕ್ಷಣಿಕ ಕ್ಷೇತ್ರಕ್ಕೆ ದೊಡ್ಡ ಹೊಡೆತ ಕೊಟ್ಟಿತ್ತು. ಈಗ ಕೊರೋನಾ ಎಫೆಕ್ಟ್ ಕಡಿಮೆ ಆಗುತ್ತಲೇ ಅದರ ಪರಿಣಾಮಗಳು ಶಿಕ್ಷಣ ಕ್ಷೇತ್ರದ ಮೇಲೆ ಮತ್ತಷ್ಟು ಪರಿಣಾಮ ಬೀರುತ್ತಿವೆ. ಕೊರೊನಾದಿಂದಾಗಿ ರಾಜ್ಯದಲ್ಲಿ ಸಾವಿರಾರು ಮಕ್ಕಳು ಶಾಲೆಯಿಂದ ದೂರ ಉಳಿದಿರುವ ಆಘಾತಕಾರಿ ಅಂಶ ಈಗ ಬಯಲಾಗಿದೆ. ಹೈಕೋರ್ಟ್ ಸೂಚನೆ ಮೇರೆಗೆ ಶಿಕ್ಷಣ ಇಲಾಖೆ ಆಪರೇಷನ್ ಡ್ರಾಪ್ ಔಟ್ ಚಿಲ್ಡ್ರನ್ಸ್ ಅಭಿಯಾನ ಪ್ರಾರಂಭ ಮಾಡಿದೆ. ಮಕ್ಕಳನ್ನ ಶಾಲೆಗೆ ವಾಪಸ್ ಕರೆತರಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ವಿಶೇಷ ಟಾಸ್ಕ್ ನೀಡಲಾಗಿದೆ. ಈ ವರ್ಷ 24,308 ವಿದ್ಯಾರ್ಥಿಗಳು ಶಾಲೆಯಿಂದ ಡ್ರಾಪ್ ಔಟ್ ಆಗಿದ್ದಾರೆ. ಈವರೆಗೂ 18,584 ವಿದ್ಯಾರ್ಥಿಗಳನ್ನು ಶಿಕ್ಷಣ ಇಲಾಖೆ ಪತ್ತೆಹಚ್ಚಿದೆ. ಇನ್ನು 5,724 ವಿದ್ಯಾರ್ಥಿಗಳ ಬಗ್ಗೆ ಈವರೆಗೂ ಯಾವುದೇ ಮಾಹಿತಿ ಇಲ್ಲ.14,871 ವಿದ್ಯಾರ್ಥಿಗಳು ಮಾತ್ರ ಶಾಲೆಗೆ ಮರು ಸೇರ್ಪಡೆ ಆಗಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ 9437 ವಿದ್ಯಾರ್ಥಿಗಳು ಶಾಲೆಯಿಂದ ದೂರ ಉಳಿದಿದ್ದಾರೆ. ಇದೀಗ ಮಕ್ಕಳ ಡ್ರಾಪ್ ಔಟ್ ವಿಚಾರ ಶಿಕ್ಷಣ ಇಲಾಖೆಗೆ ದೊಡ್ಡ ತಲೆ ನೋವು ತಂದಿದ್ದು, ಮಕ್ಕಳ ಪತ್ತೆಗೆ ಡಿಡಿಪಿಐಗಳು, ಬಿಇಓಗಳು & ಶಿಕ್ಷಕರಿಗೆ ಸೂಚನೆ ನೀಡಲಾಗಿದೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments