Select Your Language

Notifications

webdunia
webdunia
webdunia
webdunia

ಹಾಲು ತರಲು ಹೋಗಿ ಹೆಣವಾದಳು

ಹಾಲು ತರಲು ಹೋಗಿ ಹೆಣವಾದಳು
ಬೆಂಗಳೂರು , ಮಂಗಳವಾರ, 28 ಅಕ್ಟೋಬರ್ 2014 (08:43 IST)
ಹಾಲು ತರಲು ಮನೆ ಸಮೀಪದ ಅಂಗಡಿಗೆ ಹೋದ ಮಹಿಳೆಯೊಬ್ಬರು ಶವವಾಗಿ ಪತ್ತೆಯಾದ ಘಟನೆ ಇಂದು ಮುಂಜಾನೆ ಬೆಂಗಳೂರಿನ  ಮಹಾಲಕ್ಷ್ಮೀ ಲೇ ಔಟ್‌ನಲ್ಲಿ ನಡೆದಿದೆ. 
 
ಮೃತ ಮಹಿಳೆಯನ್ನು 50 ವರ್ಷದ ಮುತ್ತುಲಕ್ಷ್ಮೀ ಎಂದು ಗುರುತಿಸಲಾಗಿದ್ದು ಇಂದು ನಸುಕಿನ ವೇಳೆ  ಮನೆಯಿಂದ ಹೊರಗೆ ಹೋಗಿದ್ದ ಅವರು ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆಕೆಯ ತಲೆಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. 7.30 ರ ಸುಮಾರಿಗೆ ಆಕೆಯ ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ಕೈಗೊಂಡಿದ್ದಾರೆ.
 
ಘಟನೆಗೆ ಕಾರಣ ತಿಳಿದು ಬಂದಿಲ್ಲ. ವೈಯಕ್ತಿಕ ದ್ವೇಷದ ಕಾರಣಕ್ಕೋ ಅಥವಾ ಇನ್ಯಾವ ಕಾರಣಕ್ಕೆ ಕೊಲೆಯಾಗಿರಬಹುದು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Share this Story:

Follow Webdunia kannada