Webdunia - Bharat's app for daily news and videos

Install App

500 ಮೀ. ಉದ್ದದ ತಿರಂಗಾ ಯಾತ್ರೆ

Webdunia
ಶನಿವಾರ, 13 ಆಗಸ್ಟ್ 2022 (18:01 IST)
75ನೇ ಸ್ವಾತಂತ್ರ್ಯ ದಿನಾಚರಣೆಗೆ ಇನ್ನೇನು 2 ದಿನ ಬಾಕಿ ಇದ್ದು, ಈ ಅಮೃತ ಘಳಿಗೆಯ ಆಚರಣೆಗೆ ಇಡೀ ದೇಶವೇ ಕಾತರದಿಂದ ಕಾಯುತ್ತಿದೆ. ದೇಶದೆಲ್ಲೆಡೆ ಅಮೃತ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಚರಿಸುತ್ತಿದ್ದು, ಬಾಗಲಕೋಟೆಯಲ್ಲಿ 500 ಮೀಟರ್ ಉದ್ದದ ತಿರಂಗಾ ಯಾತ್ರೆ ಮಾಡುವುದರ ಮೂಲಕ ವಿಶೇಷವಾಗಿ ಆಚರಣೆ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರಿಂದ ಈ ಕಾರ್ಯಕ್ರಮ ಆಯೋಜನೆ ಆಗಿದ್ದು, ಶಾಸಕ ವೀರಣ್ಣ ಚರಂತಿಮಠ ಯಾತ್ರೆಗೆ ಚಾಲನೆ ನೀಡಿದರು. ನಗರದ ವಿದ್ಯಾಗಿರಿಯ ಪ್ರಮುಖ ಬಡಾವಣೆಗಳಲ್ಲಿ  500 ಮೀಟರ್ ಉದ್ದದ ತಿರಂಗವು ಸಂಚರಿಸುತ್ತಿದ್ದು, ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು. ಯಾತ್ರೆಯಲ್ಲಿ ವಿಶೇಷವಾಗಿ ಗಾಂಧೀಜಿ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ವೇಷಧಾರಿಗಳು ನೋಡುಗರ ಗಮನ ಸೆಳೆದರು. ಜಿಲ್ಲೆಯಾದ್ಯಂತ ಮನೆಗಳ ಮೇಲೆ, ಅಂಗಡಿಗಳ ಮೇಲೆ ಸೇರಿದಂತೆ ಎಲ್ಲೆಡೆ ತ್ರಿವರ್ಣ ಧ್ವಜ ಗಮನ ಸೆಳೆಯುತ್ತಿದ್ದು, ಅಮೃತ ಮಹೋತ್ಸವಕ್ಕೆ ಹೊಸ ಮೆರುಗು ತಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments