Webdunia - Bharat's app for daily news and videos

Install App

ಕೊರೋನಾ ದಿಂದ ಮೃತಪಟ್ಟವರ ಕುಟುಂಬಕ್ಕೆ ಪ್ರತಿ ತಿಂಗಳು 5 ಸಾವಿರ: ಸರ್ಕಾರದಿಂದ ಘೋಷಣೆ

Webdunia
ಗುರುವಾರ, 14 ಅಕ್ಟೋಬರ್ 2021 (21:01 IST)
ತಿರುವನಂತಪುರಂ:- ಕೊವಿಡ್ 19 ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ಪ್ರತಿ ತಿಂಗಳೂ ಹೆಚ್ಚುವರಿಯಾಗಿ 5 ಸಾವಿರ ರೂ. ನೀಡಲು ಕೇರಳ ಸರ್ಕಾರ ನೀಡಿದೆ. ಈ ನೆರವನ್ನು ಮೂರು ವರ್ಷಗಳ ಕಾಲ ನೀಡಲು ಕೇರಳ ರಾಜ್ಯ ಸರ್ಕಾನ ನಿರ್ಧರಿಸಿದ್ದು, ಇದು ಬಡತನ ರೇಖೆಗಿಂತ ಕೆಳಗೆ (BPL) ಇರುವ ಕುಟುಂಬಗಳಿಗೆ ಮಾತ್ರ ಅನ್ವಯ ಆಗಲಿದೆ.ಬುಧವಾರ ಟ್ವೀಟ್ ಮಾಡಿರುವ ಕೇರಳ ಸಚಿವ ಥಾಮಸ್ ಐಸಾಕ್, ಕೊವಿಡ್ 19ನಿಂದ ಮೃತಪಟ್ಟವರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ 50 ಸಾವಿರ ರೂ.ವಿಶೇಷ ನೆರವು ನೀಡಲಾಗುತ್ತಿದೆ. ಈಗ ಅದರೊಂದಿಗೆ ಕೇರಳದಲ್ಲಿ ಕೊವಿಡ್ 19 ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ತಿಂಗಳಿಗೆ 5 ಸಾವಿರ ರೂ.ಮಾಸಾಶನ ಹೆಚ್ಚುವರಿಯಾಗಿ ಕೊಡಲು ನಿರ್ಧರಿಸಲಾಗಿದೆ. ಇದು ಬಿಪಿಎಲ್ ಕುಟುಂಬಗಳಿಗೆ ಮಾತ್ರ ಅನ್ವಯ ಆಗಲಿದೆ ಮತ್ತು ಮುಂದಿನ ಮೂರು ವರ್ಷಗಳ ಕಾಲ ನೀಡಲ್ಪಡುತ್ತದೆ ಎಂದು ತಿಳಿಸಿದ್ದಾರೆ.ಕೇರಳದ ಬಿಪಿಎಲ್ ಕುಟುಂಬಕ್ಕೆ ಸೇರಿದ ವ್ಯಕ್ತಿ ರಾಜ್ಯದ ಒಳಗೆ, ಹೊರಗೆ ಅಥವಾ ದೇಶದ ಹೊರಗೆ ಅಂದರೆ ಬೇರೆ ದೇಶದಲ್ಲಿ ಮೃತಪಟ್ಟರೂ ಅವರ ಕುಟುಂಬ ಈ ವಿಶೇಷ ಆರ್ಥಿಕ ನೆರವಿಗೆ ಒಳಪಡುತ್ತದೆ ಎಂದು ಕ್ಯಾಬಿನೆಟ್ ನಲ್ಲಿ ನಿರ್ಧಾರ ತೆಗೆದುಕೊಂಡಿದ್ದಾಗಿ ಕೇರಳ ಮುಖ್ಯಮಂತ್ರಿ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ.ಬುಧವಾರ ನಡೆದ ಕೇರಳ ಕ್ಯಾಬಿನೆಟ್ ನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನಮ್ಮ ಯೋಜನೆಗೆ ಅರ್ಹರಾದವರು ಒಂದು ಪುಟದ ಅರ್ಜಿ ತುಂಬಿ ಸಲ್ಲಿಸಬೇಕಾಗುತ್ತದೆ. ಹಾಗೇ, ಇದಕ್ಕೆ ಸಂಬಂಧಪಟ್ಟ ಎಲ್ಲ ಕ್ರಮಗಳನ್ನೂ ಆಯಾ ಜಿಲ್ಲಾಧಿಕಾರಿಗಳು ಮತ್ತು ಕಂದಾಯ ಅಧಿಕಾರಿಗಳು ತೆಗೆದುಕೊಳ್ಳುತ್ತಾರೆ. ಇನ್ನು ಕೊವಿಡ್ 19 ನಿಂದ ಮೃತಪಟ್ಟವರ ಕುಟುಂಬದಲ್ಲಿ ಯಾರೂ ಸರ್ಕಾರಿ ಉದ್ಯೋಗಿಗಳು ಮತ್ತು ತೆರಿಗೆe ತುಂಬುತ್ತಿರುವ ವ್ಯಕ್ತಿಗಳು ಇಲ್ಲವೆಂಬುದನ್ನು ಆಯಾ ಹಳ್ಳಿಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಖಚಿತಪಡಿಸಬೇಕು ಎಂಬಿತ್ಯಾದಿ ವಿಷಯಗಳನ್ನು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮುಂದಿನ ಸುದ್ದಿ
Show comments