Webdunia - Bharat's app for daily news and videos

Install App

ಮೃತ ಪ್ರೊಬೆಷನರಿ ಪಿಎಸ್ಐ ಕುಟುಂಬಕ್ಕೆ 59 ಲಕ್ಷ ನೆರವು: ಮಾನವೀಯತೆ ಮೆರೆದ ಪ್ರಶಿಕ್ಷಣಾರ್ಥಿಗಳು

Webdunia
ಸೋಮವಾರ, 7 ಜನವರಿ 2019 (19:33 IST)
ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಪ್ರೊಬೆಷನರಿ ಪಿಎಸ್ಐ ಬಸವರಾಜ ಶಂಕ್ರೆಪ್ಪ ಮಂಚಣ್ಣನವರ್ ಕುಟುಂಬಕ್ಕೆ ಪೊಲೀಸ್ ತರಬೇತಿ ಕೇಂದ್ರದ ಪ್ರಶಿಕ್ಷಣಾರ್ಥಿಗಳು ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.

ಕಲಬುರಗಿ ನಗರದ ರಾಮ ಮಂದಿರ ವೃತ್ತದಲ್ಲಿರುವ ಗ್ರ್ಯಾಂಡ್ ಸೆಂಟ್ರಲ್ ಕಾಂಪ್ಲೆಕ್ಸ್ ಎದುರು ಭಾನುವಾರ ಬೆಳಿಗ್ಗೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಪ್ರೊಬೆಷನರಿ ಪಿಎಸ್ಐ ಬಸವರಾಜ ಶಂಕ್ರೆಪ್ಪ ಮಂಚಣ್ಣನವರ್ (30) ಕುಟುಂಬಕ್ಕೆ ನಾಗನಹಳ್ಳಿ ಪೊಲೀಸ್ ತರಬೇತಿ ಕೇಂದ್ರದ ಪಿಎಸ್ಐ ತರಬೇತಿ ಪಡೆಯುತ್ತಿರುವ 590 ಜನ ಪ್ರಶಿಕ್ಷಣಾರ್ಥಿಗಳು ತಲಾ 10 ಸಾವಿರ ರೂಪಾಯಿಯಂತೆ ಸಂಗ್ರಹಿಸಿ 59 ಲಕ್ಷ ರೂಪಾಯಿ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.

ಬಡತನದಲ್ಲಿ ಛವ ಬಿಡದೆ ಓದಿ ಪಿಎಸ್ಐ ಹುದ್ದೆಗೆ ಏರಿದ್ದ ಜಿಲ್ಲೆಯ ಸೇಡಂ ತಾಲ್ಲೂಕಿನ ಬೆನಕನಹಳ್ಳಿಯ ಬಸವರಾಜ ಮಂಚಣ್ಣನವರ್ ಅವರ ಅಸಹಜ ಸಾವಿಗೆ ಕಂಬನಿ ಮಿಡಿದ ಸಹಪಾಠಿ ಪ್ರಶಿಕ್ಷಣಾರ್ಥಿಗಳು ಸರ್ಕಾರ ಮತ್ತು ಬೇರೆ ಯಾವ ನೆರವಿಗೂ ಕಾಯದೇ ತಾವೇ ಸ್ವತಃ ತಲಾ 10 ಸಾವಿರ ರೂಪಾಯಿಗಳನ್ನು ಸಂಗ್ರಹಿಸಿ ಮಂಚಣ್ಣನವರ್ ಕುಟುಂಬದವರಿಗೆ ನೀಡಿದ್ದಾರೆ.

 ಸ್ವಗ್ರಾಮದಲ್ಲಿ ಮಡುಗಟ್ಟಿದ ಶೋಕ: ಪ್ರೊಬೆಷನರಿ ಪಿಎಸ್ಐ ಮಂಚಣ್ಣನವರ್ ಅನುಮಾನಾಸ್ಪದ ಸಾವು ಅವರ ಕುಟುಂಬಕ್ಕೆ ಬರಸಿಡಿಲೇ ಬಡಿದಂತಾಗಿದ್ದು, ಸಾವಿನ ಸುದ್ದಿ ಕೇಳಿ ಗ್ರಾಮಸ್ಥರ ದು:ಖದ ಕಟ್ಟೆ ಒಡೆದು ಹೋಗಿದೆ. ಬೆನಕನಹಳ್ಳಿ ಗ್ರಾಮದಲೀಗ ಶೋಕ ಮಡುಗಟ್ಟಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಕೊಲ್ಲಲ್ಪಟ್ಟ ಉಗ್ರರು ಪಾಕ್‌ನವರು ಎಂಬುದಕ್ಕೆ ಪ್ರಮುಖ ಸಾಕ್ಷಿ ಕೊಟ್ಟ ಅಮಿತ್ ಶಾ

ಧರ್ಮಸ್ಥಳ: ಶ್ವಾನ ಪಡೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಒಂದನೇ ಪಾಯಿಂಟ್ಸ್‌ನ ಹುಡುಕಾಟದಲ್ಲಿ ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments