Webdunia - Bharat's app for daily news and videos

Install App

6.5 ಕೋಟಿ ರೂ ಮೌಲ್ಯದ ಸರಕಾರಿ ಜಮೀನು ಒತ್ತುವರಿ ತೆರವು!

Webdunia
ಶನಿವಾರ, 14 ಮೇ 2022 (14:33 IST)
ಬೆಂಗಳೂರು ನಗರ ಜಿಲ್ಲೆಯ 5 ತಾಲೂಕುಗಳಲ್ಲಿ ಒತ್ತುವರಿ ಮಾಡಲಾಗಿದ್ದ ಕೆರೆ, ಕುಂಟೆ, ಗೋಮಾಳ, ಸ್ಮಶಾನ, ರಾಜಕಾಲುವೆ ಮತ್ತು ಇತರೆ ಸರ್ಕಾರಿ ಜಮೀನುಗಳ ಒತ್ತುವರಿ ತೆರವು ಮಾಡಲಾಗಿದೆ.
ಜಿಲ್ಲಾಧಿಕಾರಿ ಜೆ. ಮಂಜುನಾಥ್ ನೇತೃತ್ವದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಶುಕ್ರವಾರ ನಡೆದಿದ್ದು, ಸುಮಾರು 6.50 ಕೋಟಿ ರೂ. ಮೌಲ್ಯದ 4.28 ಎಕರೆ ಜಮೀನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ 0.11 ವಿಸ್ತೀರ್ಣದ ಒಟ್ಟು ಎರಡು ಸರ್ಕಾರಿ ಕೆರೆಗಳು ಒತ್ತುವರಿಯಾಗಿದ್ದು ಅದರ ಅಂದಾಜು ಸುಮಾರು 55 ಲಕ್ಷ ರೂ. ಮೌಲ್ಯವಾಗಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿಯ ಅಗರ ಗ್ರಾಮದ 0.06 ವಿಸ್ತೀರ್ಣದ 30 ಲಕ್ಷ ರೂ. ಹಾಗೂ ಅನೇಕಲ್ ತಾಲೂಕಿನ ಕಸಬಾ ಹೋಬಳಿಯ ಬ್ಯಾಗಡದೇನಹಳ್ಳಿ ಗ್ರಾಮದ 0.05 ವಿಸ್ತೀರ್ಣದ 25 ಲಕ್ಷ ರೂ. ಮೌಲ್ಯದ ಕೆರಗಳ ಒತ್ತುವರಿ ಮಾಡಿ ತೆರವುಗೊಳಿಸಲಾಗಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ 1.35 ವಿಸ್ತೀರ್ಣದ ಒಟ್ಟು ಎರಡು ನಕಾಶೆ ದಾರಿ ಒತ್ತುವರಿಯಾಗಿದ್ದು ಅದರ ಅಂದಾಜು ಸುಮಾರು 95 ಲಕ್ಷ ರೂ. ಮೌಲ್ಯವಾಗಿದೆ. ಆನೇಕಲ್ ತಾಲ್ಲೂಕಿನ ಕಸಬಾ ಹೋಬಳಿಯ ಗೆರೆಟಗನಬೆಲೆ ಗ್ರಾಮದ 1-20 ವಿಸ್ತೀರ್ಣದ ರೂ.75 ಲಕ್ಷ ಹಾಗೂ ಅತ್ತಿಬೆಲೆ ಹೋಬಳಿಯ ಕೂಡ್ಲೀಪುರ ಗ್ರಾಮದ 0-15 ವಿಸ್ತೀರ್ಣದ 20 ಲಕ್ಷ ರೂ. ಮೌಲ್ಯದ ನಕಾಶೆ ದಾರಿ ಒತ್ತುವರಿ ಮಾಡಿ ತೆರವು ಮಾಡಲಾಗಿದೆ.
ಯಲಹಂಕ ತಾಲೂಕಿನ ಜಾಲ-1 ಹೋಬಳಿಯ ಹುತ್ತನಹಳ್ಳಿ ಗ್ರಾಮದ 2.00 ವಿಸ್ತೀರ್ಣದ ಸರ್ಕಾರಿ ಗೋಮಾಳ ಒತ್ತುವರಿಯಾಗಿದ್ದು ಅದರ ಅಂದಾಜು ಸುಮಾರು 380 ಲಕ್ಷ ರೂ. ಮೌಲ್ಯದ ಒತ್ತುವರಿ ಮಾಡಿ ತೆರೆವುಗೊಳಿಸಲಾಗಿದೆ. 
ಬೆಂಗಳೂರು ದಕ್ಷಿಣ ತಾಲೂಕಿನ ಬೇಗೂರು ಹೋಬಳಿಯ ನ್ಯಾನಪನಹಳ್ಳಿ ಗ್ರಾಮದ 0-00.08 ವಿಸ್ತೀರ್ಣದ ಸರ್ಕಾರಿ ಗುಂಡುತೋಪು ಒತ್ತುವರಿಯಾಗಿದ್ದು ಅದರ ಅಂದಾಜು ಸುಮಾರು 2.19 ಲಕ್ಷ ರೂ. ಮೌಲ್ಯದ ಒತ್ತುವರಿ ಮಾಡಿ ತೆರವುಗೊಳಿಸಲಾಗಿದೆ.
ಆನೇಕಲ್ ತಾಲೂಕಿನ ಸರ್ಜಾಪುರ ಹೋಬಳಿಯ ದೊಡ್ಡತಿಮ್ಮಸಂದ್ರ ಗ್ರಾಮದ 0-19 ವಿಸ್ತೀರ್ಣದ 100.00 ಲಕ್ಷ ರೂ. ಮೌಲ್ಯದ ಹಾಗೂ ಸರ್ಜಾಪುರ ಹೋಬಳಿಯ ಹಲಸಹಳ್ಳಿ ತಿಪ್ಪಸಂದ್ರ ಗ್ರಾಮದ 0-02 ವಿಸ್ತೀರ್ಣದ 15 ಲಕ್ಷ ರೂ. ಮೌಲ್ಯದ ಸರ್ಕಾರಿ ಖರಾಬು ಒತ್ತುವರಿ ಮಾಡಿ ತೆರೆವುಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮಿಷಾ ಪ್ರಿಯಾಗೆ ಕ್ಷಮೆಯೇ ಇಲ್ಲ, ಪರಿಹಾರ ಹಣವೂ ಬೇಡ ಎಂದ ಯೆಮನ್ ಕುಟುಂಬ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

40 ವರ್ಷ ಮೇಲ್ಪಟ್ಟವರು ಹೃದಯಾಘಾತವಾಗದಂತೆ ಈ ಟಿಪ್ಸ್ ಪಾಲಿಸಿ: ಡಾ ದೇವಿಪ್ರಸಾದ್ ಶೆಟ್ಟಿ

ಸುರ್ಜೇವಾಲ ಮೀಟಿಂಗ್ ಬಗ್ಗೆ ಕಾಂಗ್ರೆಸ್ ನೊಳಗೇ ಅಸಮಾಧಾನ

ಮುಂದಿನ ಸುದ್ದಿ
Show comments