Webdunia - Bharat's app for daily news and videos

Install App

ಕೊಳವೆ ಬಾವಿಗೆ ಬಿದ್ದ 6 ವರ್ಷದ ಬಾಲಕಿ: ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

Webdunia
ಶನಿವಾರ, 22 ಏಪ್ರಿಲ್ 2017 (23:18 IST)
ರಾಜ್ಯದಲ್ಲಿ ಮತ್ತೊಂದು ಕೊಳವೆ ಬಾವಿ ದುರಂತ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಝಂಜರವಾಡ ಗ್ರಾಮದಲ್ಲಿ 6 ವರ್ಷದ ಬಾಲಕಿ ತೆರೆದ ಕೊಳವೆಬಾವಿಗೆ ಬಿದ್ದಿದ್ದಾಳೆ. ಬಾಲಕಿಯನ್ನ ಕಾವೇರಿ ಅಜಿತ್ ಮಾದರ ಎಂದು ಗುರ್ತಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಸಂಜೆ 5.30ರ ಸುಮಾರಿಗೆ ಹೊಲದ ಪಕ್ಕದಲ್ಲಿ ಮಗುವನ್ನ ಆಡಲು ಬಿಟ್ಟು ತಾಯಿ ಸವಿತಾ ಸೌದೆ ತರಲು ತೆರಳಿದ್ದಾಗ ಈ ಅವಘಡ ಸಂಭವಿಸಿದೆ. ಮಗು ಕೊಳವೆ ಬಾವಿಗೆ ಬಿದ್ದದ್ದನ್ನ ಗಮನಿಸಿದ ತಾಯಿ ಹಗ್ಗದ ಮೂಲಕ ಮೇಲೆತ್ತಲು ಯತ್ನಿಸಿದರೂ ಸಾಧ್ಯವಾಗಿಲ್ಲ.
ಜಿಲ್ಲಾಡಳಿತದಿಂದ 10 ಜೆಸಿಬಿಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಮಣ್ಣು ಕುಸಿಯದಂತೆ ಕೇಸಿಂಗ್ ಪೈಪ್ ಸಹ ಅಳವಡಿಸಲಾಗಿದೆ. ಸ್ಥಳದಲ್ಲೇ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ಪುಣೆಯಿಂದ ಎನ್`ಡಿಆರ್`ಎಫ್ ಪಡೆ ಕೂಡ ಆಗಮಿಸಲಿದೆ.

ಬಾಗಲಕೋಟೆಯ ಜಮಖಂಡಿ ಮೂಲದ ಶಂಕರ ಹಿಪ್ಪರಗಿ ಎಂಬುವವರ ಹೊಲದ ಕೊಳವೆಬಾವಿ ಇದಾಗಿದ್ದು, ಕೊಳವೆಬಾವಿ ಕೊರೆಸಿ ಹಲವು ದಿನಗಳೇ ಕಳೆದಿದ್ದರೂ ಅದನ್ನ ಮುಚ್ಚಿರಲಿಲ್ಲ. ನೀರು ಸಿಗದ ಕೊಳವೆಬಾವಿಯನ್ನ ಕೂಡಲೆ ಮುಚ್ಚಬೇಕೆಂದು ಸರ್ಕಾರದ ಾದೇಶವಿದ್ದರೂ ಮಾಲೀಕರು ಮಾತ್ರ ನಿರ್ಲಕ್ಷ್ಯ ವಹಿಸುತ್ತಿರುವುದು ಇಂತಹ ದುರಂತಗಳಿಗೆ ಎಡೆಮಾಡಿಕೊಡುತ್ತಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ರಾಜಕಾರಣಕ್ಕೆ ಸೋಮಣ್ಣ ನಿವೃತ್ತಿ: ದೇವರೇ ಹೇಳಿದರೂ ಸ್ಪರ್ಧಿಸಲ್ಲ ಎಂದು ಕೇಂದ್ರ ಸಚಿವ

Karnataka Weather: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಏಲ್ಲೆಲ್ಲಿ ಮಳೆ ಸಾಧ್ಯತೆ ಇಲ್ಲಿದೆ ಮಾಹಿತಿ

ಟ್ರಾಫಿಕ್‌ ಫೈನ್‌ ಆಫರ್‌ಗೆ ರಾಜಧಾನಿಯಲ್ಲಿ ಭರ್ಜರಿ ರೆಸ್ಪಾನ್ಸ್‌: ಮೊದಲ ದಿನ ವಸೂಲಿಯಾದ ದಂಡವೆಷ್ಟು ಗೊತ್ತಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಮುಂದಿನ ಸುದ್ದಿ
Show comments