Webdunia - Bharat's app for daily news and videos

Install App

ಕಳ್ಳಸಾಗಾಣಿಕೆ: 6,400 ಆಮೆಗಳ ವಶ

Webdunia
ಗುರುವಾರ, 12 ಜನವರಿ 2017 (12:49 IST)
ಇದು ದೇಶದಲ್ಲೇ ಅತಿ ದೊಡ್ಡ ವಶೀಕರಣ ಪ್ರಕರಣ. ಉತ್ತರ ಪ್ರದೇಶದ ಅಮೇಥಿಯಲ್ಲಿ ಎಸ್‌ಟಿಎಫ್ ಸಿಬ್ಬಂದಿ ನಡೆಸಿದ ಒಂದು ಯಶಸ್ವಿ ಕಾರ್ಯಾಚರಣೆಯಲ್ಲಿ 6,400 ಆಮೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಕಳ್ಳಸಾಗಣೆ ಮಾಡುತ್ತಿದ್ದ ಜಾಲದ ಕಿಂಗ್‌ಪಿನ್‌ನನ್ನು ಕೂಡ ಬಂಧಿಸಲಾಗಿದೆ. 
ಮುಖ್ಯ ಆರೋಪಿಯನ್ನು ರಾಜ್ ಬಹಾದ್ದೂರ್ ಎಂದು ಗುರುತಿಸಲಾಗಿದ್ದು ಗೌರಿಗಂಜ್ ನಗರದಲ್ಲಿರುವ ಆತನ ಮನೆಯಂಗಳದ ತುಂಬೆಲ್ಲ ಆಮೆಗಳು ಹರಿದಾಡುತ್ತಿರುವುದನ್ನು ಕಂಡವರೊಬ್ಬರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯಾಚರಣೆ ನಡೆಸಿದ ಎಸ್‌ಟಿಎಫ್ ತಂಡ ಎಲ್ಲ ಆಮೆಗಳನ್ನು ವಶಪಡಿಸಿಕೊಂಡಿದೆ.
 
ಇವುಗಳನ್ನು ಗೋಣಿಚೀಲದಲ್ಲಿ ತುಂಬಿಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಆಮೆಗಳ ಕಳ್ಳಸಾಗಾಣಿಕೆ ಜಾಲದ ಮುಖ್ಯ ಆರೋಪಿಯೇ ಬಂಧನಕ್ಕೊಳಪಟ್ಟಿರುವುದರಿಂದ ಇತರ ಆರೋಪಿಗಳನ್ನು ಪತ್ತೆ ಹಚ್ಚುವುದು ಸುಲಭವಾಗಬಹುದು. ಈ ಆಮೆಗಳನ್ನು ಬಾಂಗ್ಲಾ, ಬರ್ಮಾ, ಚೀನಾ, ಥೈಲ್ಯಾಂಡ್, ಹಾಂಗ್‌ಕಾಂಗ್ ಸೇರಿದಂತೆ ಹಲವು ದೇಶಗಳಿಗೆ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ.

20 ( 1 ಕಾಲಿಗೆ 5) ಉಗುರುಗಳುಳ್ಳ ಆಮೆ ಅದೃಷ್ಟವನ್ನು ತರುತ್ತದೆ ಎಂಬ ನಂಬಿಕೆ ಫೆಂಗ್ ಶೂಯಿ ಸಂಪ್ರದಾಯದಲ್ಲಿದೆ, ಎಂದು   ವನ್ಯಜೀವಿ ಅಪರಾಧ ನಿಯಂತ್ರಣ ದಳದ ಹಿರಿಯ ಅಧಿಕಾರಿಗಳೊಬ್ಬರು ತಿಳಿಸಿದ್ದಾರೆ.
 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments