Webdunia - Bharat's app for daily news and videos

Install App

ಮುಂಬೈ ನಂಟಿಗೆ ಬೆಚ್ಚಿಬಿದ್ದ ಜನ : 67 ಜನರಿಗೆ ಕೊರೊನಾ

Webdunia
ಗುರುವಾರ, 21 ಮೇ 2020 (16:10 IST)
ಮುಂಬೈ ಮೂಲದ ನಂಟಿನಿಂದ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು, 13 ಜನರಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ.

ಹಾಸನ ಜಿಲ್ಲೆಯಲ್ಲಿ ಹೊಸದಾಗಿ 13 ಜನರಲ್ಲಿ ಕೋವಿಡ್-19 ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 67ಕ್ಕೆ ಏರಿಕೆಯಾಗಿದೆ. ಹೊಸದಾಗಿ ವರದಿಯಾದ ಎಲ್ಲಾ ಪ್ರಕರಣಗಳಿಗೆ ಮುಂಬೈ ಮೂಲದ ನಂಟಿದೆ.

ಹಾಸನ ಜಿಲ್ಲೆಯ ಪಾಲಿಗೆ ಮಹಾರಾಷ್ಟ್ರದಿಂದ ಆಗಮಿಸಿದವರಿಂದ ಕರೋನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿದೆ. ಸೋಂಕು ಪತ್ತೆಯಾದವರಲ್ಲಿ ಆರು ಮಂದಿ ಹೊಳೆನರಸೀಪುರ ತಾಲ್ಲೂಕು ಹಾಗೂ 7ಮಂದಿ ಚನ್ನರಾಯಪಟ್ಟಣ ತಾಲ್ಲೂಕಿಗೆ ಸೇರಿದವರಾಗಿದ್ದಾರೆ.

ಈ ವರೆಗಿನ ವರದಿಯಂತೆ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಗರಿಷ್ಠ 42 ಮಂದಿ ಸೋಂಕಿತರು ಪತ್ತೆಯಾಗಿದ್ದು, ಹೊಳೆನರಸೀಪುರ 16, ಆಲೂರು 3,  ಅರಕಲಗೂರು 2, ಅರಸೀಕೆರೆ 1, ಹಾಸನದಲ್ಲಿ 3 ಪ್ರಕರಣ ದಾಖಲಾಗಿವೆ. ಹಾಸನ ತಾಲ್ಲೂಕಿನ ಮೂರು ಪ್ರಕರಣಗಳಲ್ಲಿ ಎರಡು ತಮಿಳುನಾಡು ಮೂಲದಿಂದ ಬಂದಿದ್ದು, ಉಳಿದ ಜಿಲ್ಲೆಯ ಎಲ್ಲಾ ಇತರ 65 ಪ್ರಕರಣಗಳು ಮಹಾರಾಷ್ಟ್ರದಿಂದ ಆಗಮಿಸಿದವರಲ್ಲಿ  ದೃಢಪಟ್ಟಿವೆ.

ಎಲ್ಲಾ ಸೋಂಕಿತರನ್ನು ಹಾಸನದ ಕೋವಿಡ್ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಶಂಕಿತರು ವಿವಿಧ ತಾಲ್ಲೂಕುಗಳಲ್ಲಿ ಸಾಂಸ್ಥಿಕ ಕೇಂದ್ರಗಳಲ್ಲಿ ಕ್ವಾರಂಟೈನ್ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments