ಮುಂಬೈ ನಂಟಿಗೆ ಬೆಚ್ಚಿಬಿದ್ದ ಜನ : 67 ಜನರಿಗೆ ಕೊರೊನಾ

Webdunia
ಗುರುವಾರ, 21 ಮೇ 2020 (16:10 IST)
ಮುಂಬೈ ಮೂಲದ ನಂಟಿನಿಂದ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು, 13 ಜನರಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ.

ಹಾಸನ ಜಿಲ್ಲೆಯಲ್ಲಿ ಹೊಸದಾಗಿ 13 ಜನರಲ್ಲಿ ಕೋವಿಡ್-19 ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 67ಕ್ಕೆ ಏರಿಕೆಯಾಗಿದೆ. ಹೊಸದಾಗಿ ವರದಿಯಾದ ಎಲ್ಲಾ ಪ್ರಕರಣಗಳಿಗೆ ಮುಂಬೈ ಮೂಲದ ನಂಟಿದೆ.

ಹಾಸನ ಜಿಲ್ಲೆಯ ಪಾಲಿಗೆ ಮಹಾರಾಷ್ಟ್ರದಿಂದ ಆಗಮಿಸಿದವರಿಂದ ಕರೋನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿದೆ. ಸೋಂಕು ಪತ್ತೆಯಾದವರಲ್ಲಿ ಆರು ಮಂದಿ ಹೊಳೆನರಸೀಪುರ ತಾಲ್ಲೂಕು ಹಾಗೂ 7ಮಂದಿ ಚನ್ನರಾಯಪಟ್ಟಣ ತಾಲ್ಲೂಕಿಗೆ ಸೇರಿದವರಾಗಿದ್ದಾರೆ.

ಈ ವರೆಗಿನ ವರದಿಯಂತೆ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಗರಿಷ್ಠ 42 ಮಂದಿ ಸೋಂಕಿತರು ಪತ್ತೆಯಾಗಿದ್ದು, ಹೊಳೆನರಸೀಪುರ 16, ಆಲೂರು 3,  ಅರಕಲಗೂರು 2, ಅರಸೀಕೆರೆ 1, ಹಾಸನದಲ್ಲಿ 3 ಪ್ರಕರಣ ದಾಖಲಾಗಿವೆ. ಹಾಸನ ತಾಲ್ಲೂಕಿನ ಮೂರು ಪ್ರಕರಣಗಳಲ್ಲಿ ಎರಡು ತಮಿಳುನಾಡು ಮೂಲದಿಂದ ಬಂದಿದ್ದು, ಉಳಿದ ಜಿಲ್ಲೆಯ ಎಲ್ಲಾ ಇತರ 65 ಪ್ರಕರಣಗಳು ಮಹಾರಾಷ್ಟ್ರದಿಂದ ಆಗಮಿಸಿದವರಲ್ಲಿ  ದೃಢಪಟ್ಟಿವೆ.

ಎಲ್ಲಾ ಸೋಂಕಿತರನ್ನು ಹಾಸನದ ಕೋವಿಡ್ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಶಂಕಿತರು ವಿವಿಧ ತಾಲ್ಲೂಕುಗಳಲ್ಲಿ ಸಾಂಸ್ಥಿಕ ಕೇಂದ್ರಗಳಲ್ಲಿ ಕ್ವಾರಂಟೈನ್ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮುಂದಿನ ಸುದ್ದಿ
Show comments