Daily Horoscope

ಬೆಂಗಳೂರಿನಲ್ಲಿ ವಾಕಿಂಗ್‌ಗೆ ಹೋಗಿದ್ದ 7 ಮಕ್ಕಳು ನಾಪತ್ತೆ

Webdunia
ಭಾನುವಾರ, 10 ಅಕ್ಟೋಬರ್ 2021 (21:46 IST)
ನಮಗೆ ಓದಿನಲ್ಲಿ ಆಸಕ್ತಿಯಿಲ್ಲ, ಕ್ರೀಡೆಯಲ್ಲಿಬ ಆಸಕ್ತಿಯಿದೆ ಎಂದು ಪತ್ರ ಬರೆದು ಬೆಂಗಳೂರಿನಲ್ಲಿ ವಾಕಿಂಗ್‌ಗೆ ಹೋಗಿದ್ದ 7 ಮಕ್ಕಳು ನಾಪತ್ತೆಯಾಗಿದ್ದಾರೆ. ಹೆಸರಘಟ್ಟ ರಸ್ತೆಯ ಸೌಂದರ್ಯ ಲೇಔಟ್‌ನ 3 ಬಾಲಕರು ಮತ್ತು ಎಜಿಬಿ ಲೇಔಟ್‌ನ ಬಾಲಕರಿಬ್ಬರು, ಬಾಲಕಿಯರಿಬ್ಬರು ನಾಪತ್ತೆಯಾಗಿದ್ದಾರೆ.
ರಾಯನ್(12), ಭೂಮಿ(13), ಚಿಂತನ್(14), ವರ್ಷಿಣಿ(21), ಪರೀಕ್ಷಿತ್(15), ಕಿರಣ್(15), ನಂದನ್(15) ನಾಪತ್ತೆಯಾದ ಮಕ್ಕಳು.
ಬಾಗಲಗುಂಟೆ, ಸೋಲದೇವನಹಳ್ಳಿ ಪೊಲೀಸ್‌ ಠಾಣೆಗೆ ಪೋಷಕರು ದೂರು ನೀಡಿದ್ದು, ಬಸ್‌, ರೈಲು ನಿಲ್ದಾಣ, ಪಾರ್ಕ್‌ಗಳಲ್ಲಿ ಪೊಲೀಸರು ತೀವ್ರ ಶೋಧ ಆರಂಭಿಸಿದ್ದಾರೆ. ಬೆಂಗಳೂರಿನ ಎಲ್ಲಾ ಪೊಲೀಸ್‌ ಠಾಣೆಗಳಿಗೆ ಮಾಹಿತಿ ರವಾನಿಸಲಾಗಿದೆ.
ಪತ್ರ ಬರೆದಿಟ್ಟು ನಾಪತ್ತೆ:
ಎಷ್ಟೋತ್ತಾದರೂ ವಾಕಿಂಗ್ ಹೋದ ಮಕ್ಕಳು ಮನೆಗೆ ಬಾರದಿದ್ದಾಗ ದಿಗ್ಬ್ರಾಂತರಾದ ಕಿರಣ್ ತಂದೆ ನಾಗರಾಜು ಸ್ನೇಹಿತರ ಮನೆ ಶಾಲೆ ಎಲ್ಲಾ ಕಡೆ ವಿಚಾರಿಸಿದಾಗ ಕಿರಣ್ ಸ್ನೇಹಿತರು ಅವರ ಮನೆಯಲ್ಲಿ ಪತ್ರ ಬರೆದಿದ್ದು ನಮಗೆ ಓದಿನಲ್ಲಿ ಆಸಕ್ತಿಯಿಲ್ಲ ಹಾಗಾಗಿ ನಾವು ಯಾವುದಾದರೂ ಕ್ರೀಡೆಯಲ್ಲಿ ಸಾಧನೆ ಮಾಡು ಹಣ ಗಳಿಸಿಕೊಂಡು ಬರುತ್ತೇವೆ ಎಂದು ಬರೆದಿದ್ದಾರೆ. ಇದರಿಂದ ಆತಂಕಕ್ಕೆ ಒಳಗಾದ ನಾಗರಾಜ ಮತ್ತು ಸ್ನೇಹಿತರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಪತ್ತೆಯಾಗಿರುವ ಬಾಲಕರ ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments