ಹಿಮಪಾತದಲ್ಲಿ ನಾಪತ್ತೆಯಾಗಿದ್ದ 7 ಯೋಧರ ಮೃತದೇಹ ಪತ್ತೆ

Webdunia
ಬುಧವಾರ, 9 ಫೆಬ್ರವರಿ 2022 (20:23 IST)
ಹೊಸದಿಲ್ಲಿ: ಅರುಣಾಚಲಪ್ರದೇಶದ ಕೆಮಾಂಗ್ ವಲಯದ ಅತಿ ಎತ್ತರದ ಪ್ರದೇಶದಲ್ಲಿ ಫೆಬ್ರವರಿ 6ರಂದು ಸಂಭವಿಸಿದ ಹಿಮಪಾತದಲ್ಲಿ ಸಿಲುಕಿದ್ದ ಎಲ್ಲ 7 ಮಂದಿ ಯೋಧರು ಮೃತಪಟ್ಟಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಹಿಮಪಾತ ಸಂಭವಿಸಿದ ಪ್ರದೇಶದಿಂದ ಯೋಧರ ಮೃತದೇಹಗಳನ್ನು ರ ತೆಗೆಯಲಾಗಿದೆ ಎಂದು ಸೇನೆ ಹೇಳಿದೆ. 
ಯೋಧರ ಸಾವಿಗೆ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅರುಣಾಚಲಪ್ರದೇಶದ ಕೆಮಾಂಗ್ ವಲಯದಲ್ಲಿ ಸಂಭವಿಸಿದ ಹಿಮಪಾತದಲ್ಲಿ ಸಿಲುಕಿ ಯೋಧರು ಮೃತಪಟ್ಟಿರುವುದು ನನ್ನ ಮನಸ್ಸಿಗೆ ತೀವ್ರ ನೋವು ಉಂಟು ಮಾಡಿದೆ. ದೇಶ ಸೇವೆಯ ಸಂದರ್ಭ ಈ ವೀರ ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ನಾನು ಅವರ ಸೇವೆ ಹಾಗೂ ಧೈರ್ಯಕ್ಕೆ ವಂದಿಸುತ್ತೇನೆ. ಮೃತಪಟ್ಟ ಯೋಧರ ಕುಟುಂಬಗಳಿಗೆ ದೇವರು ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. 
ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಕೇಂದ್ರ ಸಚಿವ ಹಾಗೂ ಅರುಣಾಚಲ ಪ್ರದೇಶದ ಸಂಸದ ಕಿರಣ್ ರಿಜಿಜು ಮೊದಲಾದವರು ಸಂತಾಪ ವ್ಯಕ್ತಪಡಿಸಿದ್ದಾರೆ. ತವಾಂಗ್ ಜಿಲ್ಲೆಯಲ್ಲಿ ಸಂಭವಿಸಿದ ಹಿಮಪಾತದ ಬಳಿಕ ಗಸ್ತು ತಂಡದ ಭಾಗವಾಗಿದ್ದ 7 ಮಂದಿ ಯೋಧರು ನಾಪತ್ತೆಯಾಗಿದ್ದರು. ‘‘ಈ ದುರಂತ ಗಡಿ ವಾಸ್ತವ ನಿಯಂತ್ರಣ ರೇಖೆ (ಎಲ್ಎಸಿ)ಯಲ್ಲಿ ರವಿವಾರ ಸಂಭವಿಸಿದೆ’’ ಎಂದು ಈ ಹಿಂದೆ ದಿರಂಗ್ ಪೊಲೀಸ್ ಠಾಣೆಯ ಉಸ್ತುವಾರಿ ಸ್ಯಾಂಗ್ ತಿನ್ಲೇ ಅವರು ಹೇಳಿದ್ದರು.‌

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಶಬರಿಮಲೆ ಯಾತ್ರೆ ಶುರು, ದರ್ಶನಕ್ಕೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

ಬಿಹಾರ ಫಲಿತಾಂಶ ಬೆನ್ನಲ್ಲೇ ರಾಹುಲ್ ಗಾಂಧಿಯನ್ನು ಭೇಟಿಯಾದ ಸಿದ್ದರಾಮಯ್ಯ

ಕೇಳಿದಾಗ ಮೊಬೈಲ್ ಕೊಡಿಸಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ

ಮುಂದಿನ ಸುದ್ದಿ
Show comments