Webdunia - Bharat's app for daily news and videos

Install App

ಬಿಜೆಪಿ ಬೆಂಬಲಿಸಿದ್ದ ಕೊಳ್ಳೇಗಾಲ ನಗರಸಭೆಯ 7ಮಂದಿ

Webdunia
ಶನಿವಾರ, 25 ಸೆಪ್ಟಂಬರ್ 2021 (21:43 IST)
ಬೆಂಗಳೂರು: ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ವಿಪ್ ಉಲ್ಲಂಘಿಸಿ ಬಿಜೆಪಿ ಬೆಂಬಲಿಸಿದ್ದ ಕೊಳ್ಳೇಗಾಲ ನಗರಸಭೆಯ 7ಮಂದಿ ಸದಸ್ಯರನ್ನು ಅನರ್ಹಗೊಳಿಸಿದ್ದ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ತಮ್ಮನ್ನು ನಗರಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ ಜಿಲ್ಲಾಧಿಕಾರಿ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿ ಕೊಳ್ಳೇಗಾಲ ನಗರಸಭೆ ಸದಸ್ಯರಾಗಿದ್ದ ಪವಿತ್ರ ಹಾಗೂ ಇತರೆ 6 ಮಂದಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು. ತೀರ್ಪು ಪ್ರಕಟಿಸಿರುವ ಹೈಕೋರ್ಟ್, ಜಿಲ್ಲಾಧಿಕಾರಿ ಆದೇಶ ಎತ್ತಿ ಹಿಡಿದಿದೆ.
ಪ್ರಕರಣದ ಹಿನ್ನೆಲೆ: 2020ರ ಅಕ್ಟೋಬರ್ 29ರಂದು ಕೊಳ್ಳೇಗಾಲ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ ತನ್ನ ಸದಸ್ಯರಿಗೆ ವಿಪ್ ಜಾರಿ ಮಾಡಿತ್ತು. ಇದನ್ನು ಉಲ್ಲಂಘಿಸಿ ಬಿಎಸ್ಪಿಯ 7 ಮಂದಿ ಸದಸ್ಯರು ಬಿಜೆಪಿ ಪರ ಮತ ಚಲಾಯಿಸಿದ್ದರು. ಪಕ್ಷದ ವಿಪ್ ಉಲ್ಲಂಘಿಸಿದ್ದ ಸದಸ್ಯರನ್ನು ಹುದ್ದೆಯಿಂದ ಅನರ್ಹಗೊಳಿಸುವಂತೆ ಕೋರಿ ಬಿಎಸ್ಪಿ ನಗರಸಭೆ ಸದಸ್ಯೆ ಜಿ. ಜಯಮರಿ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ದೂರಿನ ವಿಚಾರಣೆ ನಡೆಸಿದ್ದ ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂಆರ್ ರವಿ ಅವರು, ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ (ಪಕ್ಷಾಂತರ ನಿಷೇಧ) ಕಾಯ್ದೆ 1987ರ ಅಡಿ 7 ಮಂದಿ ಸದಸ್ಯರನ್ನು ಅನರ್ಹಗೊಳಿಸಿ ಇದೇ ಸೆಪ್ಟೆಂಬರ್ 6ರಂದು ಆದೇಶಿಸಿದ್ದರು. ಜಿಲ್ಲಾಧಿಕಾರಿ ಆದೇಶದಿಂದ ನಗರಸಭೆ ಸದಸ್ಯ ಸ್ಥಾನ ಕಳೆದುಕೊಂಡ ಗಂಗಮ್ಮ, ನಾಗಮಣಿ, ನಾಗಸುಂದ್ರಮ್ಮ, ಪ್ರಕಾಶ್, ರಾಮಕೃಷ್ಣ, ನಾಸಿರ್ ಷರೀಫ್ ಹಾಗೂ ಪವಿತ್ರಾ ಹೈಕೋರ್ಟ್ ಮೆಟ್ಟಿಲೇರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments