Webdunia - Bharat's app for daily news and videos

Install App

7ನೇ ತರಗತಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ಕೊನೆಗೂ ಅರೆಸ್ಟ್!

Webdunia
ಮಂಗಳವಾರ, 17 ಆಗಸ್ಟ್ 2021 (19:33 IST)
ಬಾಲಕಿಯನ್ನು ಮೇಲೆ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಕೊನೆಗೂ ಮಂಗಳೂರಿನ ಬಜ್ಪೆ ಪೊಲೀಸರು ಬಂಧಿ
ಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕನ್ನಡಿಕಟ್ಟೆ-ಮೇಲಂತಬೆಟ್ಟು ನಿವಾಸಿ ಮನೋಜ್ ಬಿ. ಶೆಟ್ಟಿ ಬಂಧಿತ ಆರೋಪಿ. 2011ರ ಜೂನ್ 24ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚೂರು ನೀರುಡೆಯ 7ನೇ ತರಗತಿಯ ವಿದ್ಯಾರ್ಥಿನಿ ಸಿದ್ಧಾರ್ಥ ನಗರದ ಸರಕಾರಿ ಶಾಲೆಗೆ ತೆರಳುತ್ತಿದ್ದರು.
ಈ ವೇಳೆ ಆರೋಪಿ ಮನೋಜ್ ಶೆಟ್ಟಿ ಮತ್ತು ಸ್ನೇಹಿತ ದಿನೇಶ್ ಅಮೀನ್ ಎಂಬವರು ಬಾಲಕಿಯನ್ನು ಪುಸಲಾಯಿಸಿ ಆಟೋರಿಕ್ಷಾದಲ್ಲಿ ಮನೆಗೆ ಕರೆದೊಯ್ದಿದ್ದರು. ಬೆಳಗ್ಗೆ 10 ಗಂಟೆ ಸುಮಾರಿಗೆ ಆರೋಪಿಗಳು ಬಾಲಕಿಯ ಅತ್ಯಾಚಾರಗೈದಿದ್ದಾರೆ. ಈ ವಿಷಯ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದಲ್ಲಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಮಂಗಳೂರು ಉತ್ತರ ಉಪ ವಿಭಾಗದ ಈ ಹಿಂದಿನ ಎಸಿಪಿ ಪುಟ್ಟ ಮಾದಯ್ಯ ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನಂತರ ಉಚ್ಚ ನ್ಯಾಯಾಲಯದಲ್ಲಿ ಜಾಮೀನು ಪಡೆದ ಆರೋಪಿ ಮನೋಜ್ ಬಿ. ಶೆಟ್ಟಿ ವಿಚಾರಣೆಯ ಸಮಯ ನ್ಯಾಯಾಲಯದ ಎದುರು ಹಾಜರಾಗದೆ ತಲೆಮರೆಸಿಕೊಂಡಿದ್ದ. ಇತ್ತ, ವಿಚಾರಣೆ ನಡೆಸಿದ ನ್ಯಾಯಾಲಯವು 2ನೇ ಆರೋಪಿ ದಿನೇಶ್ ಅಮೀನ್ ಎಂಬಾತನಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments