Select Your Language

Notifications

webdunia
webdunia
webdunia
webdunia

ಮಂತ್ರಿಗಿರಿಗಾಗಿ ಲಾಬಿ ನಡೆಸಲು 8 ಶಾಸಕರು ದೆಹಲಿಗೆ ದೌಡು

ಮಂತ್ರಿಗಿರಿಗಾಗಿ ಲಾಬಿ ನಡೆಸಲು 8 ಶಾಸಕರು ದೆಹಲಿಗೆ ದೌಡು
ಬೆಂಗಳೂರು , ಸೋಮವಾರ, 1 ಸೆಪ್ಟಂಬರ್ 2014 (10:42 IST)
ಬೆಂಗಳೂರು:  ರಾಜ್ಯದಲ್ಲಿ ಸಚಿವ ಸಂಪುಟದಲ್ಲಿ ವಿಸ್ತರಣೆ ಮತ್ತು ನಿಗಮ, ಮಂಡಳಿಗಳಿಗೆ ನೇಮಕಕ್ಕೆ ಸಿದ್ಧತೆ ನಡೆಯುತ್ತಿರುವ ಹಿನ್ನೆಲೆಯಲ್ಲಿ  ಮಂತ್ರಿಗಿರಿಯ ಮೇಲೆ ಮತ್ತು ನಿಗಮ, ಮಂಡಳಿಗಳ ಮೇಲೆ  ಶಾಸಕರ ಕಣ್ಣು ಇದೀಗ ಬಿದ್ದಿದೆ. ಹೇಗಾದರೂ ಮಾಡಿ ಮಂತ್ರಿಸ್ಥಾನವನ್ನು ದಕ್ಕಿಸಿಕೊಳ್ಳಲು ಸಚಿವ ಸ್ಥಾನದ ಆಕಾಂಕ್ಷಿಗಳು ತುದಿಗಾಲಲ್ಲಿ ನಿಂತಿದ್ದಾರೆ.

 ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಅವರು ಹೈಕಮಾಂಡ್ ಜೊತೆ ಚರ್ಚೆಗೆ ಸೆಪ್ಟೆಂಬರ್ 3ರಂದು ದೆಹಲಿಗೆ ತೆರಳಲಿದ್ದಾರೆಂಬ ಸುದ್ದಿ ಹರಡುತ್ತಿದ್ದಂತೆ   ಸಚಿವ ಸ್ಥಾನದ ಆಕಾಂಕ್ಷಿಗಳು ನಾಮುಂದು ತಾ ಮುಂದು ಎಂಬಂತೆ   ದೆಹಲಿಗೆ ದೌಡಾಯಿಸಿದ್ದಾರೆ.  

8 ಶಾಸಕರು ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಿ ತಮಗೆ ಸಚಿವ ಸ್ಥಾನಕ್ಕೆ ಪರಿಗಣಿಸಬೇಕೆಂದು ಲಾಬಿ ನಡೆಸಲಿದ್ದಾರೆ. ವಿನಯ್ ಕುಲಕರ್ಣಿ, ಈಶ್ವರ್ ಖಂಡ್ರೆ, ರಾಜಶೇಖರ್ ಪಾಟೀಲ್ ಹುಮ್ನಾಬಾದ್ ಸೇರಿದಂತೆ 8 ಶಾಸಕರು ಇವರ ಪೈಕಿ ಸೇರಿದ್ದಾರೆ. 

Share this Story:

Follow Webdunia kannada