Webdunia - Bharat's app for daily news and videos

Install App

8 ಸಾವಿರ ಎಕರೆ ಭಸ್ಮ; ತಪ್ಪಿತಸ್ಥರಿಗೆ ತಕ್ಕ ಶಾಸ್ತಿ ಮಾಡ್ತೇವೆ ಎಂದವರಾರು?

Webdunia
ಸೋಮವಾರ, 25 ಫೆಬ್ರವರಿ 2019 (16:54 IST)
ಬಂಡೀಪುರದಲ್ಲಿ ನಡೆದ ಕಾಡ್ಗಿಚ್ಚು ಅತ್ಯಂತ ಬೇಸರ ಉಂಟಾಗಿದೆ ಎಂದು ಡಿಸಿಎಂ ಹೇಳಿದ್ದಾರೆ.

ಸುಮಾರು 8 ಸಾವಿರ ಎಕರೆ ಪ್ರದೇಶದುದ್ದಕ್ಕೂ ಬೆಂಕಿ‌ಕೆನ್ನಾಲಿಗೆ ಆವರಿಸಿ, ಇಡೀ ಅರಣ್ಯ ಸುಟ್ಟು ಹೋಗಿದೆ. ಇದರ ಹಿಂದೆ ಯಾರದ್ದೇ ಕೈವಾಡ ಇದ್ದರೂ ಅವರ ವಿರುದ್ಧ ಕ್ರಮ‌ ತೆಗೆದುಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅಲ್ಲಿನ‌ ಸಂಪೂರ್ಣ ಪರಿಸರ ಹಾಳಾಗಿದೆ. ಸಾಕಷ್ಟು ಪ್ರಾಣಿಗಳು ಜೀವ ಕಳೆದುಕೊಂಡಿದೆ. ಅರಣ್ಯ‌ ಇಲಾಖೆ ಈ ಭಾಗಕ್ಕೆ‌ನೀರು ಹಾಕುವ ಕೆಲಸ ಮಾಡುತ್ತಿದೆ ಎಂದರು. 

ಲೋಕಸಭೆ ಚುನಾವಣೆ ಸೀಟುಗೆ ಹಂಚಿಕೆ ವಿಚಾರವಾಗಿ ಇಂದು‌ ಜೆಡಿಎಸ್‌ನ ಇಬ್ಬರು ನಾಯಕರೊಂದಿಗೆ ನಾನು ಹಾಗೂ ದಿನೇಶ್ ಗುಂಡೂರಾವ್‌ ಸಭೆ ನಡೆಸಲಿದ್ದೇವೆ. ಸಭೆ ಬಳಿಕ ತೀರ್ಮಾನ ಮಾಡಲಾಗುವುದು ಎಂದರು. 

ಕ್ಯಾಬಿನೆಟ್‌ ಇದ್ದ ದಿನ ಒಬ್ಬ ಸಚಿವರು ತಿಂಡಿ ಅಥವಾ ಕಾಫಿಗೆ ಕರೆಯುವ ಪದ್ಧತಿ ಮಾಡಿಕೊಂಡಿದ್ದೇವೆ. ಕ್ಯಾಬಿನೆಟ್‌ಗೆ ಹೋಗುವ ಮುನ್ನ ಈ ಬಗ್ಗೆ ಚರ್ಚೆ ಮಾಡಲು ಈ ಪದ್ಧತಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣ ಭೈರೇಗೌಡ ಅವರು ತಿಂಡಿಗೆ ಆಹ್ವಾನಿಸಿದ್ದರು ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments