Webdunia - Bharat's app for daily news and videos

Install App

ಜೋಲಿಗೆ ಬಲಿಯಾದ ಬಾಲೆ

Webdunia
ಸೋಮವಾರ, 2 ಮೇ 2016 (08:51 IST)
ತಮ್ಮನಿಗಾಗಿ ಕಟ್ಟಿದ್ದ ಜೋಲಿಯಲ್ಲಿ ಆಟವಾಡುತ್ತಿದ್ದಾಗ, ಅಚಾನಕ್ ಆಗಿ ಅದು ಕುತ್ತಿಗೆಗೆ ಸುತ್ತಿಕೊಂಡು ಬಾಲಕಿ ಮೃತಪಟ್ಟ ದಾರುಣ ಘಟನೆ ಸುಂಕದಕಟ್ಟೆಯಲ್ಲಿ ನಡೆದಿದೆ. 
 
ಸುಂಕದಕಟ್ಟೆಯ ಮಾರ್ಕಂಡೇಶ್ವರನಗರ ನಿವಾಸಿ ಅಂಜಲಿ (9)ಮೃತ ದುರ್ದೈವಿಯಾಗಿದ್ದು ಆಕೆ ಮೂರನೆಯ ತರಗತಿಯಲ್ಲಿ ಓದುತ್ತಿದ್ದಳು. ಶನಿವಾರ ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
 
ಕೆಲ ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದ ಅಂಜಲಿ ತಾಯಿ ಗೌರಮ್ಮ ಮರು ಮದುವೆಯಾಗಿದ್ದರು. ಮೊದಲ ಪತಿಯಿಂದ ಇಬ್ಬರು ಮಕ್ಕಳನ್ನು ಹೊಂದಿರುವ ಗೌರಮ್ಮಗೆ ಎರಡನೆಯ ಪತಿಯಿಂದಲೂ ಸಹ ಇಬ್ಬರು ಮಕ್ಕಳಿದ್ದಾರೆ.  ಅಂಜಲಿ ಹಿರಿಯ ಪತಿಯ ಮಗಳಾಗಿದ್ದು ಕೊನೆಯ ಮಗು ಭರತ್‌ಗೆಂದು ಜೋಲಿ ಕಟ್ಟಲಾಗಿತ್ತು.
 
ಶನಿವಾರ ಸಂಜೆ 4.30ರ ಸುಮಾರಿಗೆ ಆ ಜೋಲಿಯಲ್ಲಿ ಆಟವಾಡುತ್ತಿದ್ದ ದುರದೃಷ್ಟವಶಾತ್ ಆ ಜೋಲಿ ಕುತ್ತಿಗೆಗೆ ಸುತ್ತಿಕೊಂಡು ಉಸಿರುಗಟ್ಟಿ ಆಕೆ ಸಾವನ್ನಪ್ಪಿದ್ದಾಳೆ.
 
ಮಗುವಿನ ಸಾವಿನ ಹಿಂದೆ ಮಲ ತಂದೆ ಮೇಲೂ ಸಂಶಯ ಹುಟ್ಟಿಕೊಂಡಿದ್ದು ಈ ಕುರಿತು ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments