Webdunia - Bharat's app for daily news and videos

Install App

BBMPಯಲ್ಲಿ 828 ಕೋಟಿ ದುರ್ಬಳಕೆ!

Webdunia
ಗುರುವಾರ, 11 ನವೆಂಬರ್ 2021 (09:19 IST)
ಬೆಂಗಳೂರು : ಬಿಬಿಎಂಪಿಯ 2018-19ನೇ ಸಾಲಿನ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ ನಡೆದಿದ್ದು, 828.36 ಕೋಟಿ ರೂ. ದುರ್ಬಳಕೆಯಾಗಿರುವುದು ಲೆಕ್ಕ ಪರಿಶೋಧನಾ ವರದಿಯಿಂದ ಬೆಳಕಿಗೆ ಬಂದಿದೆ.
ಇದರಲ್ಲಿ 684.11 ಕೋಟಿ ರೂ. ಮೊತ್ತಕ್ಕೆ ಆಕ್ಷೇಪಣೆ ಸಲ್ಲಿಸಿದ್ದು, 144.25 ಕೋಟಿಗಳನ್ನು ಅಧಿಕಾರಿಗಳು, ಗುತ್ತಿಗೆದಾರರಿಂದ ವಸೂಲು ಮಾಡಲು ಶಿಫಾರಸು ಮಾಡಲಾಗಿದೆ.
ಪಾಲಿಕೆಯ 2018-19ನೇ ಸಾಲಿನ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ 879 ಪುಟಗಳ ಲೆಕ್ಕ ಪರಿಶೋಧನಾ ವರದಿಯನ್ನು ಸಿದ್ಧಪಡಿಸಿದ್ದು, ಇದರಲ್ಲಿ ಸಾಮಾನ್ಯ ಆಡಳಿತ, ಶಿಕ್ಷಣ, ಕಂದಾಯ, ಆರೋಗ್ಯ ಮತ್ತು ಕಾಮಗಾರಿ ವಿಭಾಗಗಳಲ್ಲಿ ನಡೆದಿರುವ ಅವ್ಯವಹಾರಗಳನ್ನು ಬಯಲು ಮಾಡಲಾಗಿದೆ. ಈ ಐದು ವಿಭಾಗಗಳಲ್ಲಿ ನಡೆದಿರುವ ಕಾನೂನುಬಾಹಿರ ಪಾವತಿ, ಅನುಮೋದಿತ ದರಕ್ಕಿಂತ ಹೆಚ್ಚು ಪಾವತಿ, ಅಧಿಕಾರಿಗಳ ಕರ್ತವ್ಯಲೋಪದಿಂದ ಉಂಟಾಗಿರುವ ನಷ್ಟ, ಪಾಲಿಕೆಗೆ ಸಂದಾಯವಾದ ಮೊತ್ತವನ್ನು ಬೊಕ್ಕಸಕ್ಕೆ ಪಾವತಿಸದಿರುವುದು ಹಾಗೂ ಇನ್ನಿತರೆ ನ್ಯೂನತೆಗಳ ಕುರಿತು ಅಂಕಿ-ಅಂಶಗಳ ಸಹಿತ ವಿವರಣಾತ್ಮಕ ಅಂಶಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಆರ್ಥಿಕವಾಗಿ ಸಂಕಷ್ಟದಲ್ಲಿರುವ ಪಾಲಿಕೆಯು ಕಾಮಗಾರಿಗಳನ್ನು ನಿರ್ವಹಿಸಿರುವ ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ, ಕೋಟ್ಯಂತರ ರೂ. ಬಾಕಿ ಉಳಿಸಿಕೊಂಡಿದೆ. ಆಸ್ತಿ ತೆರಿಗೆ ಮತ್ತು ಇನ್ನಿತರೆ ಮೂಲಗಳಿಂದ ಸಂಗ್ರಹವಾಗುತ್ತಿರುವ ವರಮಾನವು ದೈನಂದಿನ ಆಡಳಿತ ನಿರ್ವಹಣೆಗಷ್ಟೇ ಸಾಕಾಗುತ್ತಿದೆ. ರಸ್ತೆ ಅಭಿವೃದ್ಧಿ, ನಿರ್ವಹಣೆ, ಮೇಲ್ಸೇತುವೆ, ಅಂಡರ್ಪಾಸ್, ವೈಟ್ಟಾಪಿಂಗ್, ಟೆಂಡರ್ಶ್ಯೂರ್ ಸೇರಿದಂತೆ ಇತರೆ ಬೃಹತ್ ಕಾಮಗಾರಿಗಳಿಗೆ ಅಗತ್ಯವಿರುವ ಅನುದಾನಕ್ಕಾಗಿ ಸರಕಾರದ ಮುಂದೆ ಕೈಯೊಡ್ಡುವಂತಾಗಿದೆ. ಪಾಲಿಕೆಯು ವಾರ್ಷಿಕ 10 ಸಾವಿರ ಕೋಟಿಗಿಂತ ಹೆಚ್ಚು ಮೊತ್ತದ ಆಯವ್ಯಯ ಮಂಡಿಸುತ್ತಿದೆ. ಲೆಕ್ಕ ಪರಿಶೋಧನಾ ವರದಿಯಂತೆ ಬಜೆಟ್ನ ಶೇ 7 ರಿಂದ ಶೇ 8ರಷ್ಟು ಮೊತ್ತವು ಭ್ರಷ್ಟರ ಪಾಲಾಗುತ್ತಿರುವ ಆರೋಪಗಳು ಕೇಳಿಬರುತ್ತಿವೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments