Webdunia - Bharat's app for daily news and videos

Install App

9.50 ಲಕ್ಷ ಡೋಸ್ ಲಸಿಕೆ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Webdunia
ಗುರುವಾರ, 2 ಡಿಸೆಂಬರ್ 2021 (21:29 IST)
ಕೋವಿಡ್ ವಿಶೇಷಸಿಕೆ ಮೇಳದಲ್ಲಿ 9.50 ಲಕ್ಷ ಡೋಸ್ ಲಸಿಕೆ ನೀಡಿದ್ದು, ಪ್ರಸ್ತುತ ಲಸಿಕಾಕರಣ ನಡೆದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ನಡೆಸಿದ್ದರು.
 
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಮೂಲಕ ರಾಜ್ಯದಲ್ಲಿ ಎರಡನೇ ಡೋಸ್ ಪಡೆದವರ ಪ್ರಮಾಣ 62% ಗೆ ಏರಿದೆ. ಮೊದಲ ಡೋಸ್ ಪಡೆದವರ ಪ್ರಮಾಣ 92% ಗೆ ತಲುಪಿದೆ. ಎರಡೂ ಡೋಸ್ ಪಡೆದವರ ಪ್ರಮಾಣ 62% ಗೆ ಏರಿದೆ. ನಿನ್ನೆವರೆಗೆ ಒಟ್ಟು 7.50 ಕೋಟಿ ಡೋಸ್ ಗಳನ್ನು ನೀಡಲಾಗಿದೆ. ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕ ಲಸಿಕೆ ನೀಡುವಲ್ಲಿ 2 ಅಥವಾ 3 ನೇ ಸ್ಥಾನದಲ್ಲಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಶ್ರಮದಿಂದ ಈ ಸಾಧನೆ ಸಾಧ್ಯವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಧಿಕಾರ ಸ್ವೀಕರಿಸಿದ ಬಳಿಕ ವಿಶೇಷ ಯೋಜನೆಗಳಿಗೆ ಬಹಳ ಒತ್ತು ನೀಡುತ್ತಿದ್ದಾರೆ ಎಂದು ಹೇಳಿದರು.
 
ಮುಂದುವರಿದ ದೇಶಗಳಲ್ಲಿ ಕೂಡ ಲಸಿಕೆ ತೆಗೆದುಕೊಳ್ಳಲು ಜನರು ಹಿಂದೇಟು ಹಾಕುತ್ತಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ಜನರು ದೊಡ್ಡ ಪ್ರಮಾಣದಲ್ಲಿ ಲಸಿಕೆ ತೆಗೆದುಕೊಳ್ಳುತ್ತಿದ್ದಾರೆ. ಹೆಚ್ಚು ರೋಗ ನಿರೋಧಕ ಶಕ್ತಿ ಪಡೆಯಲು ಎರಡೂ ಡೋಸ್ ಗಳನ್ನು ಪಡೆಯಬೇಕು. ಲಸಿಕೆಯ ಒಂದು ಡೋಸ್ ಪಡೆದರೆ ಸ್ವಲ್ಪ ರೋಗ ನಿರೋಧಕ ಶಕ್ತಿ ಬರುತ್ತದೆ. ಸಂಪೂರ್ಣ ರೋಗ ನಿರೋಧಕ ಶಕ್ತಿಗಾಗಿ ಹಾಗೂ ವೈರಾಣು ವಿರುದ್ಧ ಸದೃಢವಾಗಿ ಹೋರಾಡಲು 2 ಡೋಸ್ ತೆಗೆದುಕೊಳ್ಳಬೇಕು. ಒಂದು ಕಣ್ಣಿದ್ದರೆ ಕಾಣಿಸುತ್ತದೆ. ಆದರೆ ಎರಡೂ ಕಣ್ಣುಗಳಿದ್ದರೆ ಸಂಪೂರ್ಣ ದೃಷ್ಟಿ ಸಿಗುತ್ತದೆ. ಹಾಗೆಯೇ ಕೊರೊನಾ ಲಸಿಕೆಯ 2 ಡೋಸ್ ತೆಗೆದುಕೊಂಡರೆ ಸಂಪೂರ್ಣ ರೋಗ ನಿರೋಧಕ ಶಕ್ತಿ ಸಿಗುತ್ತದೆ ಎಂದರು.
 
ಕೊರೊನಾ ಪರೀಕ್ಷೆ ಸಂಬಂಧ ವಿಮಾನ ನಿಲ್ದಾಣಗಳಲ್ಲಿ ಸಿದ್ಧತೆ ನಡೆದಿದೆ. ನಿನ್ನೆ ರಾತ್ರಿ ಮತ್ತು ಇಂದು ಬೆಳಗ್ಗೆ ವಿಮಾನ ನಿಲ್ದಾಣದಲ್ಲಿನ ಸಿದ್ಧತೆ ಬಗ್ಗೆ ಪರಿಶೀಲನೆ ಮಾಡಲಾಗಿದೆ. ವಿದೇಶದಿಂದ ಬಂದ ಪ್ರಯಾಣಿಕರಿಗೆ ತಪಾಸಣೆ, ಪರೀಕ್ಷೆ ಬಗ್ಗೆ ಸೂಚನೆ ನೀಡಲಾಗಿದೆ. ಪರೀಕ್ಷೆ ಮುಗಿದ 3 ಅಥವಾ 4 ಗಂಟೆಯೊಳಗೆ ಫಲಿತಾಂಶ ಬರುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
 
ವಿಮಾನ ನಿಲ್ದಾಣಗಳಲ್ಲಿ ಅಬೋಟ್ ಮತ್ತು ಆರ್ ಟಿಪಿಸಿಆರ್ ಎಂಬ ಎರಡು ರೀತಿಯ ಪರೀಕ್ಷೆಗಳಿವೆ. ಅಬೋಟ್ ಪರೀಕ್ಷೆಗೆ ಕೇಂದ್ರ ಸರ್ಕಾರ 3,000 ರೂ. ನಿಗದಿಪಡಿಸಿದೆ. ಅಬೋಟ್ ನಿಂದ ಕೇವಲ ಅರ್ಧ ಅಥವಾ 1 ಗಂಟೆಯೊಳಗೆ ಫಲಿತಾಂಶ ಪಡೆಯಬಹುದು. ಅಬೋಟ್ ಪರೀಕ್ಷೆಯಲ್ಲಿ ನಿಖರತೆ ಇಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಆದರೆ ಅಬೋಟ್ ಕೂಡ ಆರ್ ಟಿಪಿಸಿಆರ್ ನಷ್ಟೇ ನಿಖರತೆ ಹೊಂದಿದೆ ಎಂದು ಸ್ಪಷ್ಟಪಡಿಸಿದರು.
 
ವಿಮಾನ ನಿಲ್ದಾಣದಲ್ಲಿ ಆರ್ ಟಿಪಿಸಿಆರ್ ಪರೀಕ್ಷೆಗೆ 500 ರೂ. ಶುಲ್ಕವಿದೆ. ಈ ಪರೀಕ್ಷೆ ನಡೆಸಿದ 3 ರಿಂದ 4 ಗಂಟೆಯೊಳಗೆ ಫಲಿತಾಂಶ ದೊರೆಯುತ್ತದೆ. ಇಡೀ ಸಮುದಾಯಕ್ಕೆ ವೈರಸ್ ಹರಡಬಾರದು ಎಂಬುದು ಸರ್ಕಾರದ ಉದ್ದೇಶ. ಕಂಪನಿ ಉದ್ಯೋಗಿಗಳು ಪರೀಕ್ಷೆ ಮಾಡಿಸಿಕೊಳ್ಳುವ ಮುನ್ನ ಮನೆಗೆ ಬಿಟ್ಟುಬಿಡಿ, ಆಮೇಲೆ ಟ್ರ್ಯಾಕ್ ಮಾಡಿಕೊಳ್ಳಿ ಎಂದು ಮನವಿ ಮಾಡುತ್ತಿದ್ದಾರೆ. ಆದರೆ ಕಳೆದ ಎರಡು ವರ್ಷಗಳಲ್ಲಿ ಸರ್ಕಾರಕ್ಕೆ ಬಹಳ ಅನುಭವ ಆಗಿದೆ. ಹೀಗಾಗಿ ಈಗಿರುವ ಕ್ರಮಗಳಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
 
ಎರಡು ಡೋಸ್ ಲಸಿಕೆ ಪಡೆದವರು ಮಾತ್ರ ಶಾಪಿಂಗ್ ಮಾಲ್ ಗೆ ಪ್ರವೇಶಿಸುವಂತೆ ನಿಯಮ ರೂಪಿಸುವಂತೆ ಬಿಬಿಎಂಪಿ ಆಯುಕ್ತರು ಮನವಿ ಮಾಡುತ್ತಾರೆ. ಮುಖ್ಯಮಂತ್ರಿಗಳು ದೆಹಲಿ ಪ್ರವಾಸ ಮುಗಿಸಿ ಬಂದ ನಂತರ ಈ ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು.
 
ನಟ ಪುನೀತ್ ರಾಜ್ ಕುಮಾರ್ ಮನೆಗೆ ಭೇಟಿ
 
ಸಚಿವ ಡಾ.ಕೆ.ಸುಧಾಕರ್ ಅವರು, ಆದಿಚುಂಚನಗಿರಿ ಮಠದ ಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರೊಂದಿಗೆ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments