9 ಸಾವಿರ ಗಿಡಗಳು ಆಕ್ರಮ ಗಣಿಗಾರಿಕೆಗೆ ನಾಶ

Webdunia
ಶುಕ್ರವಾರ, 17 ಸೆಪ್ಟಂಬರ್ 2021 (21:18 IST)
ಬೆಂಗಳೂರು: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಗುಂಡೇಹಳ್ಳಿಯಲ್ಲಿ 36 ಎಕರೆ ಗೋಮಾಳ ಜಮೀನಿನಲ್ಲಿ 9 ಸಾವಿರ ಗಿಡಗಳನ್ನು ಅಕ್ರಮ ಗಣಿಗಾರಿಕೆಗೆ ನಾಶಪಡಿಸಿದ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಿ ಹೈಕೋರ್ಟ್ ಆದೇಶಿಸಿದೆ.
ಮಾಲೂರು ನಿವಾಸಿ ರವೀಂದ್ರ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಸಿಜೆ ಸತೀಶ್​​​ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಪೀಠ ತನ್ನ ಆದೇಶದಲ್ಲಿ, ಅರಣ್ಯ ಇಲಾಖೆಯು ಸರ್ಕಾರದ ಹಣದಲ್ಲಿ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಗುಂಡೇಹಳ್ಳಿಯ ಸರ್ವೇ ನಂಬರ್ 66ರಲ್ಲಿನ 36 ಎಕರೆ 2 ಗುಂಟೆ ಗೋಮಾಳ ಜಮೀನಿನಲ್ಲಿ 1995ರಲ್ಲಿ ಒಟ್ಟು 9,500 ಗಿಡಗಳನ್ನು ನೆಟ್ಟಿತ್ತು. ನಂತರ ನಿರ್ವಹಣೆಗಾಗಿ ಬನಹಳ್ಳಿ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿತ್ತು. ಆದರೆ, ಈ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿ ಎಲ್ಲ ಗಿಡಗಳನ್ನು ನಾಶಪಡಿಸಲಾಗಿದೆ. ಇದರಲ್ಲಿ ಗ್ರಾಮ ಪಂಚಾಯತಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
ಬನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ, ಅರಣ್ಯ ಪ್ರದೇಶವನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿಲ್ಲ. ಆ ಜಾಗಕ್ಕೂ ಗ್ರಾಮ ಪಂಚಾಯತಿ ಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.
ಇದೇ ವೇಳೆ, ಸರ್ಕಾರ ವ್ಯತಿರಿಕ್ತ ಹೇಳಿಕೆ ದಾಖಲಿಸಿದ್ದು, ಜಾಗದ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿದ್ದು, ಈ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದವರ ವಿರುದ್ಧ ಕ್ರಮ ಕೈಗೊಂಡಿದ್ದಾಗಿ ತಿಳಿಸಿದೆ.
ಆದ್ದರಿಂದ ಈ ಕುರಿತು ಲೋಕಾಯುಕ್ತ ತನಿಖೆ ಆದೇಶಿಸುವುದು ಸೂಕ್ತ ಎಂದು ಪೀಠ ಅಭಿಪ್ರಾಯಪಟ್ಟಿದೆ.  ಅಲ್ಲದೇ, ಪ್ರಕರಣ ಕುರಿತು ಲೋಕಾಯುಕ್ತ ಸಂಸ್ಥೆಯು ತನಿಖೆ ನಡೆಸಬೇಕು ಹಾಗೂ ತನಿಖೆಯನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸಬೇಕು. ಈ ಜಾಗದಲ್ಲಿ ಅರಣ್ಯ ಇಲಾಖೆಯು ಮತ್ತೆ ಆರು ತಿಂಗಳ ಒಳಗೆ ಗಿಡಗಳನ್ನು ನೆಡಬೇಕು. ಅಕ್ರಮ ಗಣಿಗಾರಿಕೆಯಿಂದ ಮತ್ತೆ ಗಿಡಗಳನ್ನು ನಾಶವಾಗದಂತೆ ನೋಡಿಕೊಳ್ಳಬೇಕು ಎಂದು ಪೀಠ ನಿರ್ದೇಶಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments