Webdunia - Bharat's app for daily news and videos

Install App

ಎಸ್ಸೆಸ್ಸೆಲ್ಸಿ 2ನೇ ದಿನ ಪರೀಕ್ಷೆಗೆ ಶೇ.99.65 ಹಾಜರಾತಿ: ಸುರೇಶ್ ಕುಮಾರ್

Webdunia
ಗುರುವಾರ, 22 ಜುಲೈ 2021 (18:23 IST)
ಕೊರೊನಾ ಭೀತಿಯ ನಡುವೆ ನಡೆದ ಭಾಷಾ ವಿಷಯಗಳ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಶೇ. 99.65 ಹಾಜರಾತಿ ಇತ್ತು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ
ಮಾತನಾಡಿದ ಅವರು, ಇಂದು ನಡೆದ ಪರೀಕ್ಷೆಯ ವೇಳೆ 18 ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದೆ. ಮಕ್ಕಳ ಮುಖದಲ್ಲಿ ಒತ್ತಡ ಕಂಡು ಬರಲಿಲ್ಲ. ಬದಲಿಗೆ ನಿರಾಳತೆ ಹಾಗೂ ಸಂತೋಷ ಇತ್ತು ಎಂದರು.
ರಾಜ್ಯದ ಹಲವಡೆ ವ್ಯಾಪಕ ಮಳೆ ಇದ್ದರೂ ಮಳೆ ಹಾಗೂ ಸಾರಿಗೆ ಸಮಸ್ಯೆಯಿಂದ ಯಾವೊಬ್ಬ ವಿದ್ಯಾರ್ಥಿಯೂ ಗೈರು ಹಾಜರಾಗಿಲ್ಲ. ಪ್ರಥಮ ಭಾಷೆ ವಿಷಯದಲ್ಲಿ 8,19,694 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಇದರಲ್ಲಿ 7,83,881 ಹೊಸಬರಾಗಿದ್ದಾರೆ. 3350 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು ಶೇ.99,62ರಷ್ಟು ಹಾಜರಾತಿ ದಾಖಲಾಗಿದೆ ಎಂದು ಅವರು ವಿವರಿಸಿದರು.
ದ್ವಿತೀಯ ಭಾಷೆ 8,27,988 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದು, 8,24,686 ವಿದ್ಯಾರ್ಥಿಗಳು ಹಾಜರಾಗಿದ್ದರು. 3302 ಗೈರು ಹಾಜರಾತಿ ದಾಖಲಾಗಿದೆ. ತೃತೀಯ ಭಾಷೆ ವಿಯದಲ್ಲಿ 8,17,640 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದು, 8,14,538 ಹಾಜರಾದ ವಿದ್ಯಾರ್ಥಿಗಳು ಆಗಿದ್ದರೆ, 3102 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಶೇ.99.62ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಅವರು ಹೇಳಿದರು.
ಕೊವಿಡ್ ಕೇರ್ ಸೆಂಟರ್ ನಲ್ಲಿ 67 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ, ವಿಶೇಷ ಕೊಠಡಿಯಲ್ಲಿ 152 ಹಾಗೂ ಹತ್ತಿರದ ಪರೀಕ್ಷಾ ಕೇಂದ್ರದಲ್ಲಿ 10,693 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಸುರೇಶ್ ಕುಮಾರ್ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಕನ್ನಡವನ್ನು ಭುವನೇಶ್ವರಿ ಮಾಡಿ ದೌರ್ಜನ್ಯ ಮಾಡಿದ್ರಿ ಎಂದಿದ್ದ ಬಾನು ಮುಷ್ತಾಕ್

ಮುಂದಿನ ಸುದ್ದಿ
Show comments