Webdunia - Bharat's app for daily news and videos

Install App

ರೈತರಿಗೆ ಕಬ್ಬಿನ ಬಾಕಿ ಪಾವತಿಸದ ಹಿನ್ನಲೆ; ಸಕ್ಕರೆ ಕಾರ್ಖಾನೆಗಳಿಗೆ ಮುಟ್ಟುಗೋಲು ಹಾಕಲು ಆದೇಶ

Webdunia
ಮಂಗಳವಾರ, 18 ಜೂನ್ 2019 (11:35 IST)
ಬೆಳಗಾವಿ : ರೈತರಿಗೆ ಕಬ್ಬಿನ ಬಾಕಿ ಪಾವತಿಸಿ ಎಂದ ಸಿಎಂ ಆದೇಶಕ್ಕೆ ಕ್ಯಾರೆ ಎನ್ನದ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದ ಹಿನ್ನಲೆಯಲ್ಲಿ ಮುಟ್ಟುಗೋಲಿಗೆ ಜಿಲ್ಲಾಧಿಕಾರಿ ಆದೇಶ ಹೊರಡಿಸಲಾಗಿದೆ ಎನ್ನಲಾಗಿದೆ.




ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿಸದ ಕಾರಣ ಬೆಂಗಳೂರಿನಲ್ಲಿ ರೈತರು ಪ್ರತಿಭಟನೆ ನಡೆಸಿ ಸಿಎಂ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದರು. ಈ ಕುರಿತು ಸಭೆ ನಡೆಸಿದ್ದ ಸಿಎಂ 15 ದಿನದೊಳಗೆ ಕಬ್ಬಿನ ಬಾಕಿ ಪಾವತಿಸಬೇಕು, ಇಲ್ಲದಿದ್ದರೆ ಕಾರ್ಖಾನೆ ಮುಟ್ಟುಗೋಲು ಹಾಕುವುದಾಗಿ ಎಚ್ಚರಿಕೆ ನೀಡಿದ್ದರು.


ಆದರೆ ಇನ್ನು ರೈತರಿಗೆ ಕಬ್ಬಿನ ಬಾಕಿ ಪಾವತಿಸಿದ ಕಾರಣ ಖಾನಾಪುರದ ಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ, ಮುನವಳ್ಳಿಯ ರೇಣುಕಾ ಶುಗರ್ಸ್, ಅಥಣಿ ಶುಗರ್ಸ್, ಕೊಳವಿ ಗೋಕಾಕ್ ಶುಗರ್ಸ್, ಕೃಷ್ಣ ಶುಗರ್ಸ್, ಬೈಲಹೊಂಗಲದ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆ, ಬೆಲ್ಲದ ಬಾಗೇವಾಡಿ ವಿಶ್ವರಾಜ ಶುಗರ್ಸ್, ಎಂಕೆ ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ, ಉಗಾರ ಶುಗರ್ಸ್ ಗಳಿಗೆ ಮುಟ್ಟುಗೋಲು ಹಾಕುವಂತೆ  ಜಿಲ್ಲಾಧಿಕಾರಿ ತಹಶೀಲ್ದಾರ್ ಗಳಿಗೆ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments