Select Your Language

Notifications

webdunia
webdunia
webdunia
webdunia

ಬಂಡೀಪುರ ಸಫಾರಿಗೆ ಪ್ರವಾಸಿಗರ ದಂಡು

ಬಂಡೀಪುರ ಸಫಾರಿಗೆ ಪ್ರವಾಸಿಗರ ದಂಡು
ಚಾಮರಾಜನಗರ , ಶುಕ್ರವಾರ, 31 ಡಿಸೆಂಬರ್ 2021 (18:21 IST)
ಚಾಮರಾಜನಗರ : ಹೊಸ ವರ್ಷದ ಮುನ್ನಾ ದಿನ ಚಾಮರಾಜನಗರ ಜಿಲ್ಲೆಯ ಬಂಡೀಪುರ ಸಫಾರಿಗೆ ಪ್ರವಾಸಿಗರ ದಂಡೇ ಆಗಮಿಸಿತ್ತು.

ಕ್ರಿಸ್ಮಸ್ ದಿನದಿಂದಲೂ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಕಳೆದ ಒಂದು ವಾರದಲ್ಲಿ ನಾಲ್ಕು ಸಾವಿರ ಜನರು ಸಫಾರಿ ಮಾಡಿದ್ದು, ಅರಣ್ಯ ಇಲಾಖೆಗೆ 22 ಲಕ್ಷ ರೂ. ಆದಾಯ ಬಂದಿದೆ.

ಬಂಡೀಪುರದಲ್ಲಿ ಇಂದು ಮತ್ತು ನಾಳೆ ಅರಣ್ಯ ಇಲಾಖೆಯ ಕಾಟೇಜ್, ಡಾರ್ಮೆಟರಿಗಳಲ್ಲಿ ವಾಸ್ತವ್ಯ ಕ್ಕೆ ನಿರ್ಬಂಧ ವಿಧಿಸಲಾಗಿದೆ.

ಅದಲ್ಲದೇ ಚಾಮರಾಜನಗರ ಜಿಲ್ಲಾದ್ಯಂತ ರೆಸಾರ್ಟ್ ಗಳು ಹೌಸ್ ಪುಲ್ ಆಗಿವೆ. ರೆಸಾರ್ಟ್ ನಲ್ಲಿ ಡಿಜೆ, ಪಾರ್ಟಿ, ಪೈರ್ ಕ್ಯಾಂಪ್ ಗೆ ಬ್ರೇಕ್ ಹಾಕಲಾಗಿದೆ.

ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಲೂ ಕೋವಿಡ್ ನೆಗೆಟಿವ್ ರಿಪೋರ್ಟ್, ಎರಡು ಡೋಸ್ ವ್ಯಾಕ್ಸಿನ್ ಕಡ್ಡಾಯ ಮಾಡಿದ್ದಾರೆ. ಆದರೂ ಹೊಸ ವರ್ಷದ ಆಚರಣೆ ಹಿನ್ನೆಲೆ ರೆಸಾರ್ಟ್ ಗಳೆಲ್ಲ ತುಂಬಿ ತುಳುಕುತ್ತಿವೆ.


Share this Story:

Follow Webdunia kannada

ಮುಂದಿನ ಸುದ್ದಿ

ಓಮೈಕ್ರಾನ್ ಸ್ಫೋಟದ ನಡುವೆಯೇ ಮಕ್ಕಳು ಎಷ್ಟು ಅಪಾಯದಲ್ಲಿದ್ದಾರೆ?