Webdunia - Bharat's app for daily news and videos

Install App

ಡಿಕೆಶಿ ಒಡೆತನದ ಸ್ಕೂಲ್​ಗೆ ಬಾಂಬ್​ ಬೆದರಿಕೆ

Webdunia
ಸೋಮವಾರ, 18 ಜುಲೈ 2022 (19:09 IST)
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಒಡೆತನದ ಶಾಲೆಗೆ ಬಾಂಬ್​ ಇಡೋದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಪೊಲೀಸರು, ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್​ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಈ ಶಾಲೆಯಲ್ಲಿ ಸಾವಿರಾರು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಅವರನ್ನೆಲ್ಲ ಬೇರೆಡೆಗೆ ಸ್ಥಳಾಂತರ ಮಾಡುವ ಕಾರ್ಯ ನಡೆಯುತ್ತಿದೆ. ಆರ್​ಆರ್ ನಗರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಡಿಕೆಶಿ ಮಾಲೀಕತ್ವದ ನ್ಯಾಶನಲ್ ಹಿಲ್​ ವ್ಯೂ ಪಬ್ಲಿಕ್ ಸ್ಕೂಲ್ ಇದೆ. ಈ ಶಾಲೆಗೆ ಬಾಂಬ್​ ಹಾಕುವುದಾಗಿ ದುಷ್ಕರ್ಮಿಗಳು ಯೂನಿಟ್​-3ಗೆ ಮೇಲ್​ ಮಾಡಿದ್ದಾರೆ. ಬೆಳಗ್ಗೆ ಸಿಬ್ಬಂದಿ ಶಾಲೆಗೆ ಬಂದಾಗ ಮೇಲ್​ ನೋಡಿ ಗಾಬರಿಯಾಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಆರ್​ಆರ್​ ನಗರ ಠಾಣೆ ಪೊಲೀಸರು ಮತ್ತು ಬಾಂಬ್​ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿದ್ದಾರೆ. ಈಗಾಗಲೇ ಶಾಲೆಯ ಯೂನಿಟ್ 1ರಿಂದ ಯೂನಿಟ್ 2ಗೆ ಒಂದೂವರೆ ಸಾವಿರ ಮಕ್ಕಳನ್ನು ಸಿಬ್ಬಂದಿ ಶಿಫ್ಟ್ ಮಾಡಿದ್ದಾರೆ. ಶಾಲೆಗೆ ಆಗಮಿಸಿದ ಡಿಕೆಶಿ ಪುತ್ರಿ ಐಶ್ವರ್ಯಾ ಶಿವಕುಮಾರ್, ಸಿಬ್ಬಂದಿ ಮತ್ತು ಪೊಲೀಸರ ಬಳಿ ಮಾಹಿತಿ ಪಡೆದರು. ಸುದ್ದಿ ತಿಳಿಯುತ್ತಿದ್ದಂತೆ ಭಯದಲ್ಲೇ ಪೋಷಕರು ಶಾಲೆ ಮುಂದೆ ಜಮಾಯಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments