Webdunia - Bharat's app for daily news and videos

Install App

ಜೈಲಿನಲ್ಲಿ ಆಧ್ಯಾತ್ಮದ ಕಡೆ ವಾಲಿದ ದರ್ಶನ್‌ಗೆ ಪುಸ್ತಕ ಕೊರಿಯರ್

Sampriya
ಗುರುವಾರ, 1 ಆಗಸ್ಟ್ 2024 (17:46 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ ಅವರ ಮನಃಪರಿವರ್ತನೆಗೆ ಹುಬ್ಬಳ್ಳಿ ಸಿದ್ಧಾರೂಢ ಮಠದಿಂದ ಪುಸ್ತಕ ಕೊರಿಯರ್ ಮಾಡಲಾಗಿದೆ.

ಸಿದ್ಧಾರೂಢರ ಚರಿತ್ರೆ ಪುಸ್ತಕವನ್ನು ಪೋಸ್ಟ್ ಮೂಲಕ ದರ್ಶನ್ ಅವರಿಗೆ ಕಳುಹಿಸಲಾಗಿದೆ ಎಂದು ಮಠದ ಕಾರ್ಯದರ್ಶಿ ಡಾ.ಗೋವಿಂದ ಮಣ್ಣೂರು ಹೇಳಿದ್ದಾರೆ.  ಜೈಲಿನಲ್ಲಿ ದಿನ ಕಳೆಯಲು ಆಧ್ಯಾತ್ಮದ ಕಡೆ ವಾಲಿರುವ ದರ್ಶನ್‌ಗೆ ಈ ಪುಸ್ತಕ ತುಂಬಾನೇ ಸಹಾಯ ಮಾಡುತ್ತದೆ ಎಂದರು.

ಸುಮಾರು 200 ರಿಂದ 250 ಪುಟಗಳ ಪುಸ್ತಕ ಅದು. ಸಿದ್ದಾರೂಢರು ನಡೆದುಬಂದ ದಾರಿಯನ್ನು ಪುಸ್ತಕ ಒಳಗೊಂಡಿದೆ. ಪುಸ್ತಕ ಓದಿ ಖಂಡಿತ ದರ್ಶನ ಬದಲಾವಣೆ ಆಗುತ್ತಾರೆ ಎಂಬ ನಿರೀಕ್ಷೆ ನಮಗಿದೆ ಎಂದರು.

ಹುಬ್ಬಳ್ಳಿಯಲ್ಲಿರುವ ಸಿದ್ಧಾರೂಢ ಮಠದಲ್ಲಿ ದರ್ಶನ್ ಅವರ ಎರಡು ಸಿನಿಮಾಗಳು ಶೂಟಿಂಗ್ ಆಗಿವೆ. 2011ರಲ್ಲಿ ದರ್ಶನ್ ಅವರು ಮಠಕ್ಕೆ ಭೇಟಿ ನೀಡಿದ್ದು, ಈ ಹಿನ್ನೆಲೆ ಅವರ ಮನಸ್ಸಿನ ಪರಿವರ್ತೆನೆಗೆ ಈ ಪುಸ್ತಕವನ್ನು ಕಳುಹಿಸಲಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments