Webdunia - Bharat's app for daily news and videos

Install App

ಜೈಲಿನಲ್ಲಿ ಆಧ್ಯಾತ್ಮದ ಕಡೆ ವಾಲಿದ ದರ್ಶನ್‌ಗೆ ಪುಸ್ತಕ ಕೊರಿಯರ್

Sampriya
ಗುರುವಾರ, 1 ಆಗಸ್ಟ್ 2024 (17:46 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ ಅವರ ಮನಃಪರಿವರ್ತನೆಗೆ ಹುಬ್ಬಳ್ಳಿ ಸಿದ್ಧಾರೂಢ ಮಠದಿಂದ ಪುಸ್ತಕ ಕೊರಿಯರ್ ಮಾಡಲಾಗಿದೆ.

ಸಿದ್ಧಾರೂಢರ ಚರಿತ್ರೆ ಪುಸ್ತಕವನ್ನು ಪೋಸ್ಟ್ ಮೂಲಕ ದರ್ಶನ್ ಅವರಿಗೆ ಕಳುಹಿಸಲಾಗಿದೆ ಎಂದು ಮಠದ ಕಾರ್ಯದರ್ಶಿ ಡಾ.ಗೋವಿಂದ ಮಣ್ಣೂರು ಹೇಳಿದ್ದಾರೆ.  ಜೈಲಿನಲ್ಲಿ ದಿನ ಕಳೆಯಲು ಆಧ್ಯಾತ್ಮದ ಕಡೆ ವಾಲಿರುವ ದರ್ಶನ್‌ಗೆ ಈ ಪುಸ್ತಕ ತುಂಬಾನೇ ಸಹಾಯ ಮಾಡುತ್ತದೆ ಎಂದರು.

ಸುಮಾರು 200 ರಿಂದ 250 ಪುಟಗಳ ಪುಸ್ತಕ ಅದು. ಸಿದ್ದಾರೂಢರು ನಡೆದುಬಂದ ದಾರಿಯನ್ನು ಪುಸ್ತಕ ಒಳಗೊಂಡಿದೆ. ಪುಸ್ತಕ ಓದಿ ಖಂಡಿತ ದರ್ಶನ ಬದಲಾವಣೆ ಆಗುತ್ತಾರೆ ಎಂಬ ನಿರೀಕ್ಷೆ ನಮಗಿದೆ ಎಂದರು.

ಹುಬ್ಬಳ್ಳಿಯಲ್ಲಿರುವ ಸಿದ್ಧಾರೂಢ ಮಠದಲ್ಲಿ ದರ್ಶನ್ ಅವರ ಎರಡು ಸಿನಿಮಾಗಳು ಶೂಟಿಂಗ್ ಆಗಿವೆ. 2011ರಲ್ಲಿ ದರ್ಶನ್ ಅವರು ಮಠಕ್ಕೆ ಭೇಟಿ ನೀಡಿದ್ದು, ಈ ಹಿನ್ನೆಲೆ ಅವರ ಮನಸ್ಸಿನ ಪರಿವರ್ತೆನೆಗೆ ಈ ಪುಸ್ತಕವನ್ನು ಕಳುಹಿಸಲಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments