Webdunia - Bharat's app for daily news and videos

Install App

ಮೇಲ್ವರ್ಗದ ಬಾಲಕಿಗೆ ಚಾಕ್ಲೇಟ್ ನೀಡಿದ್ದಕ್ಕೆ ಆಕೆಯ ಕುಟುಂಬದವರು ಬಾಲಕನಿಗೆ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 24 ಸೆಪ್ಟಂಬರ್ 2018 (07:16 IST)
ಮುಂಬೈ : ಮೇಲ್ವರ್ಗದ ಬಾಲಕಿಗೆ ಚಾಕ್ಲೇಟ್ ನೀಡಿದ್ದಕ್ಕೆ 13 ವರ್ಷದ ದಲಿತ ಬಾಲಕನೊಬ್ಬನನ್ನು ಥಳಿಸಿ, ಬೆತ್ತಲಾಗಿ ಮೆರವಣಿಗೆ ಮಾಡಿದ ಅಮಾನವೀಯ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ್‍ದ ಗ್ರಾಮವೊಂದಲ್ಲಿ ನಡೆದಿದೆ.


ಹಲ್ಲೆಗೆ ಒಳಗಾದ ಬಾಲಕ ಹಾಗೂ ಹಲ್ಲೆ ಮಾಡಿದ ಕುಟುಂಬದ ಬಾಲಕಿ ಇಬ್ಬರು ಪರಿಚಯಸ್ಥರಾಗಿದ್ದ ಕಾರಣ ಕಳೆದ ತಿಂಗಳು ಶಾಲೆಯಿಂದ ಮನೆಗೆ ಮರಳುತ್ತಿದ್ದ ಆಕೆಗೆ ಬಾಲಕ ಚಾಕ್ಲೇಟ್ ನೀಡಿದ್ದಾನೆ. ಮನೆಗೆ ಹೋದ ಬಾಲಕಿ ಚಾಕ್ಲೇಟ್ ನೀಡಿದ ಕುರಿತು ಮನೆಯವರಿಗೆ ತಿಳಿಸಿದ್ದಾಳೆ. ತಕ್ಷಣವೇ ಬಾಲಕಿಯನ್ನು ಮನೆಯವರು ಮುಂಬೈನಲ್ಲಿದ್ದ ಚಿಕ್ಕಪ್ಪನ ಮನೆಗೆ ಕಳುಹಿಸಿದ್ದರು.


ಆದರೆ ಈ ವಿಷಯ ಬಾಲಕಿಯ ಚಿಕ್ಕಪ್ಪನ ಕಿವಿಗೆ ಬೀಳುತ್ತಲೇ ಆತ ಕೆಲ ಸ್ನೇಹಿತರನ್ನು ಕರೆದುಕೊಂಡು ಬಾಲಕಿಯೊಂದಿಗೆ ಗ್ರಾಮಕ್ಕೆ ಮರಳಿ ಬಾಲಕನ ಮನೆಗೆ ನುಗ್ಗಿ ಆತನಿಗೆ ಥಳಿಸಿ ಬೆತ್ತಲೆ ಮಾಡಿ ಅವನ ಮನೆಯಿಂದ ಗ್ರಾಮ ಪಂಚಾಯತ್‍ವರೆಗೆ ಮೆರವಣಿಗೆ ಮಾಡಿದ್ದಾರೆ.


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ಹಾಪುರ್ ಪೊಲೀಸರು, ಬಾಲಕಿಯ ಇಬ್ಬರು ಸಂಬಂಧಿಕರನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಕಾಯ್ದೆ 1989 ಅಡಿ ಪ್ರಕರಣ ದಾಖಲಾಗಿದೆ. ಘಟನೆಯಿಂದಾಗಿ ಗ್ರಾಮದಲ್ಲಿ ಎರಡೂ ಸಮುದಾಯಗಳ ನಡುವೆ ಸಂಘರ್ಷ ಪ್ರಾರಂಭವಾಗಿದ್ದು, ಗ್ರಾಮದಲ್ಲಿ ಶಾಂತಿ ಕಾಪಾಡಲು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments