Webdunia - Bharat's app for daily news and videos

Install App

ಕರ್ತವ್ಯದಲ್ಲಿದ್ದ ಪೊಲೀಸ್​ಗೆ ಹಿಂದಿನಿಂದ ಬಂದು ಗುದ್ದಿದ ಗೂಳಿ

Webdunia
ಭಾನುವಾರ, 3 ಏಪ್ರಿಲ್ 2022 (18:49 IST)
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಹಲವು ವಿಡಿಯೋಗಳು ಮೈ ನಡುಗಿಸುತ್ತವೆ. ಅದರಲ್ಲೊಂದು ಈಗ ವೈರಲ್​ ಆಗಿರೋ ಈ ವಿಡಿಯೋ. ದೆಹಲಿಯ ದಯಾಳ್​​ಪುರ ಎಂಬಲ್ಲಿರುವ ಶೇರ್​ಪುರದಲ್ಲಿ ಪೊಲೀಸ್​ ಕಾನ್​ಸ್ಟೆಬಲ್​ ಜ್ಞಾನ್ ಸಿಂಗ್ ಎಂಬುವರು ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ಪಾಡಿಗೆ ಕೆಲಸ ಮಾಡುತ್ತಿದ್ದ ಕಾನ್​ಸ್ಟೆಬಲ್​​ಗೆ ಹಿಂದಿನಿಂದ ಬಂದ ಗೂಳಿಯೊಂದು ಗುದ್ದಿದೆ. ಅವರಿಗೆ ಗೂಳಿ ಬಂದು ಗುದ್ದುವವರೆಗೂ ಅಲ್ಲಿ ಗೂಳಿ ಇದ್ದಿದ್ದೇ ಗೊತ್ತಿಲ್ಲ. ಅದೆಷ್ಟರ ಮಟ್ಟಿಗೆ ಜೋರಾಗಿ ಗುದ್ದಿದೆಯೆಂದರೆ, ಜ್ಞಾನ್ ಸಿಂಗ್ ಗಾಳಿಯಲ್ಲಿ ಸ್ವಲ್ಪ ದೂರ ಹಾರಿ ಹೋಗಿ ಕೆಳಗೆ ಬಿದ್ದಿದ್ದಾರೆ. ಬಳಿಕ ಅಲ್ಲಿಯೇ ಸುತ್ತಲೂ ಇದ್ದ ಜನರು, ಡ್ಯೂಟಿಯಲ್ಲಿದ್ದ ಇತರ ಪೊಲೀಸರು ಆಗಮಿಸಿ ಜ್ಞಾನ್ ಸಿಂಗ್​ರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.ಪೊಲೀಸ್​ ಕಾನ್​ಸ್ಟೆಬಲ್​ ಜ್ಞಾನ್ ಸಿಂಗ್ ಅವರಿಗೆ ಅದೃಷ್ಟವಶಾತ್​ ಹೆಚ್ಚೇನೂ ಅಪಾಯ ಆಗಲಿಲ್ಲ ಎಂದು ಹೇಳಲಾಗಿದ್ದು, ಚಿಕಿತ್ಸೆ ಪಡೆದ ಅವರು ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆಗಿದ್ದಾರೆ. ಹೀಗೆ ಬೀಡಾಡಿ ಗೂಳಿಗಳು ದಾಳಿ ಮಾಡುವುದು ಇದೇ ಮೊದಲೇನೂ ಅಲ್ಲ. ಕಳೆದ ವರ್ಷ ಗುಜರಾತ್​​ನ ಭಾವನಗರದಲ್ಲಿ ಇಂಥದ್ದೇ ಒಂದು ಘಟನೆ ನಡೆದಿತ್ತು. ವ್ಯಕ್ತಿಯೊಬ್ಬನ ಮೇಲೆ ಗೂಳಿ ದಾಳಿ ನಡೆಸಿ ಅವರೂ ಕೂಡ ಗಂಭೀರ ಗಾಯಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಬಿಜೆಪಿ ಶಾಸಕ ತಂದಿದ್ದ ಉಡುಗೊರೆಯನ್ನು ಪ್ರಧಾನಿ ಮೋದಿಗೆ ಕೊಟ್ಟಿದ್ದು ನಿಜಾನಾ: ಡಿಕೆಶಿ ಸ್ಪಷ್ಟನೆ

ಸೆಲ್ಫಿ ಹುಚ್ಚಾಟಕ್ಕೆ ಆನೆ ದಾಳಿಯಿಂದ ಜಸ್ಟ್ ಎಸ್ಕೇಪ್ ಆದ ಪ್ರವಾಸಿಗನಿಗೆ ಬಿತ್ತು ಭಾರೀ ದಂಡ

ಬೀದಿ ನಾಯಿ ಪರ ಟ್ವೀಟ್ ಮಾಡಿದ ಸಿದ್ದರಾಮಯ್ಯ: ಇದಕ್ಕೇನಾ ಬಿರಿಯಾನಿ ಕೊಡ್ತಿರೋದು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments