Webdunia - Bharat's app for daily news and videos

Install App

ಪತಿಯ ವಿರುದ್ಧ ತ್ರಿವಳಿ ತಲಾಕ್ ಕೇಸ್ ದಾಖಲು

Webdunia
ಗುರುವಾರ, 22 ಸೆಪ್ಟಂಬರ್ 2022 (11:29 IST)
ಕೊಪ್ಪಳ : ನಾನು ಷರಿಯತ್ ಪ್ರಕಾರ ಬೇರೆ ಮದುವೆಯಾಗುತ್ತೇನೆ. ನಿನಗೆ ತಲಾಕ್ ಕೊಡುತ್ತೇನೆ. ನಿನಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪತ್ನಿಗೆ ಹೇಳಿ ಹೋದಾತನ ವಿರುದ್ಧ ತ್ರಿವಳಿ ತಲಾಕ್ ಕೇಸ್ ದಾಖಲಾಗಿದೆ.
 
ಕೊಪ್ಪಳ ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಮುಸ್ಲಿಂ ಮಹಿಳೆಯರ ಮದುವೆಯ ರಕ್ಷಣೆ ಕಾಯ್ದೆಯಡಿ ಖಾಜೀದಾ ಬೇಗಂ ಗಂಡನ ವಿರುದ್ಧ ತ್ರಿವಳಿ ತಲಾಕ್ನಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 

ಈ ಕುರಿತು ಪತಿ ಹಾಗೂ ಅವರ ಮನೆಯವರ ಮೇಲೆ ದೂರು ದಾಖಲಾಗಿ ಕೋರ್ಟ್ನಲ್ಲಿ ವಿಚಾರಣೆಯಲ್ಲಿತ್ತು. ಖಾಜೀದಾ ಬೇಗಂ ಅವರು ಕೊಪ್ಪಳದ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಗಂಡನ ವಿರುದ್ಧ ಡೊಮೆಸ್ಟಿಕ್ ವೈಲೆನ್ಸ್ ಪ್ರಕರಣ ದಾಖಲು ಮಾಡಿದ್ದರ ಕುರಿತಂತೆ ಸೆ.15 ರಂದು ವಿಚಾರಣೆ ನಡೆಯುತ್ತಿತ್ತು. 

ಖಾಜೀದಾ ಬೇಗಂ ತನ್ನ ತಂದೆಯೊಂದಿಗೆ ಕೋರ್ಟ್ಗೆ ಆಗಮಿಸಿದ್ದ ವೇಳೆ ಕೋರ್ಟ್ ಗೇಟ್ ಬಳಿ ಪತಿ ಸೈಯದ್ ವಾಹೀದ್ ಆತ್ತಾರ್ ತಡೆದು ನಿಲ್ಲಿಸಿ ನಾನು ಷರಿಯತ್ ಪ್ರಕಾರ ಬೇರೆ ಮದುವೆಯಾಗುತ್ತೇನೆ. ನಿನಗೆ ತಲಾಕ್ ಕೊಡುತ್ತೇನೆ. ನಿನಗೂ ನನಗೂ ಯಾವುದೇ ಸಂಬಂಧವಿಲ್ಲ.

ನನ್ನ ತಂಟೆಗೆ ಬಂದರೆ ಸಾಯಿಸಿ ಬಿಡುತ್ತೇನೆ ಎಂದು ಹೇಳಿ ಮೂರು ಬಾರಿ ತಲಾಕ್ ಶಬ್ದ ಹೇಳಿ  ಹೋಗಿರುವ ಕುರಿತು ಖಾಲೀದಾ ಬೇಗಂ, ಸೈಯದ್ ವಾಹೀದ್ ಮೇಲೆ ಸೆ.18 ರಂದು ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯಲ್ಲಿ ಮುಸ್ಲಿಂ ಮಹಿಳೆಯರ ಮದುವೆಯ ರಕ್ಷಣೆ ಕಾಯ್ದೆಯಡಿಯಲ್ಲಿ ತ್ರಿವಳಿ ತಲಾಕ್ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಆರ್ ಸಿಬಿ ವಿರುದ್ಧವೇ ಕೇಸ್

ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಮುಂದಿನ ಸುದ್ದಿ
Show comments