Select Your Language

Notifications

webdunia
webdunia
webdunia
webdunia

ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡಿ ಎಂದು ಕಾಂಗ್ರೆಸ್​ ಪಕ್ಷದ ನಾಯಕರಿಗೆ ಸವಾಲ್

ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡಿ ಎಂದು ಕಾಂಗ್ರೆಸ್​ ಪಕ್ಷದ ನಾಯಕರಿಗೆ ಸವಾಲ್
bangalore , ಬುಧವಾರ, 10 ಆಗಸ್ಟ್ 2022 (16:09 IST)
ಕರ್ನಾಟಕ ಕಾಂಗ್ರೆಸ್ ನಾಯಕರ ಜಗಳ ಬೀದಿಗೆ ಬಂದಿದೆ. ಸಿದ್ದರಾಮೋತ್ಸವಕ್ಕೆ ಕೌಂಟರ್‌ ನೀಡಲು ಡಿ.ಕೆ.ಶಿವಕುಮಾರ್ ಪಾದಯಾತ್ರೆ ಮಾಡುತ್ತಿದ್ದಾರೆ. ಈ ಮೂಲಕ ತನ್ನ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಹೇಳಿದರು. ಕರ್ನಾಟಕದಲ್ಲಿ ಸಿಎಂ ಬದಲಾವಣೆ ಕುರಿತು ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿರುವ ಕುರಿತು ಅಸಮಾಧಾನ ಹೊರಹಾಕಿ, ಕಾಂಗ್ರೆಸ್​​ ಪಕ್ಷಕ್ಕೆ ಹೊಸ ಅಧ್ಯಕ್ಷರನ್ನು ನೇಮಿಸಬೇಕೆಂದು ಕೆಲವರು ಹೇಳುತ್ತಿದ್ದಾರೆ. ನಿಮ್ಮ ಪಕ್ಷದಲ್ಲೇ ಎಷ್ಟೋ ವಿಷಯಗಳು ಕೊಳೆತು ನಾರುತ್ತಿದೆ. ಅದನ್ನು ಸರಿಪಡಿಸಿಕೊಳ್ಳಿ. ರಾಜ್ಯದಲ್ಲಿ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಕಾಂಗ್ರೆಸ್​ನವರು ಮಳೆಹಾನಿ ಬಗ್ಗೆ ಏನಾದ್ರೂ ಮಾತಾಡಿದ್ದಾರಾ? ಕಾಂಗ್ರೆಸ್​​ನವರದ್ದು ಏನಿದ್ದರೂ ನೆಗೆಟಿವ್​ ಆಲೋಚನೆಗಳೇ. ನಮ್ಮ ಪಕ್ಷದ ಆಂತರಿಕ ವಿಚಾರಕ್ಕೆ ತಲೆಹಾಕುವ ನೈತಿಕತೆ ಇಲ್ಲ. ನಿಮಗೆ ತಾಕತ್ತಿದ್ರೆ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡಿ ಎಂದು ಕಾಂಗ್ರೆಸ್​ ಪಕ್ಷದ ನಾಯಕರಿಗೆ ಕಂದಾಯ ಸಚಿವ ಆರ್‌. ಅಶೋಕ್  ಸವಾಲೆಸೆದರು. 

Share this Story:

Follow Webdunia kannada

ಮುಂದಿನ ಸುದ್ದಿ

ಟ್ವೀಟ್ ಮಾಡಿದವರನ್ನೇ ಕೇಳಿ-ವಿಪಕ್ಷ ನಾಯಕ ಸಿದ್ದರಾಮಯ್ಯ