Webdunia - Bharat's app for daily news and videos

Install App

ರಾಜಾಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ: ಪರಿಹಾರದ ಭರವಸೆ

Webdunia
ಗುರುವಾರ, 8 ಅಕ್ಟೋಬರ್ 2015 (13:57 IST)
ನಗರದ ಸಂಪಿಗೆ ಹಳ್ಳಿ ಬಳಿ ರಾಜಾ ಕಾಲುವೆಯಲ್ಲಿ ನಿನ್ನೆ ಕೊಚ್ಚಿ ಹೋಗಿದ್ದ ಬಾಲಕನ ಮೃತ ದೇಹವು ನಾಪತ್ತೆಯಾಗಿದ್ದ  ಸ್ವಲ್ಪ ದೂರದಲ್ಲಿಯೇ ಇಂದು ಪತ್ತೆಯಾಗಿದ್ದು, ಬಾಲಕನ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.  
 
ನಿನ್ನೆ ನಗರದ ಥಣಿಸಂದ್ರ ವ್ಯಾಪ್ತಿಯಲ್ಲಿರುವ ಅಶೋಕ್ ನಗರದ ನಿವಾಸಿ, ಬಾಲಕ ಪ್ರಕಾಶ್(15) ಎಂಬ ಬಾಲಕ ನಿನ್ನೆ ಸಂಜೆ ಆಟವಾಡುತ್ತಿದ್ದ ವೇಳೆ ನಗರದ ವೀರಣ್ಣನ ಪಾಳ್ಯದ ಬಳಿಯ ರಾಜಾ ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಬಾಲಕನ ಮೃತ ದೇಹ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದರು. ಪರಿಣಾಮ ಇಂದು ಅಂತಿಮವಾಗಿ ಬಾಲಕನ ದೇಹ ಪತ್ತೆಯಾಗಿದೆ.   
 
ಇನ್ನು ಈ ಕಾರ್ಯಾಚರಣೆಯು ಬಿಬಿಎಂಪಿಯ ಮೇಯರ್ ಮಂಜುನಾಥ್ ರೆಡ್ಡಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ಮೃತ ಬಾಲಕನ ಕುಟುಂಬಸ್ಥರಿಗೆ ಬಿಬಿಎಂಪಿ ವತಿಯಿಂದ ಸೂಕ್ತ ಪರಿಹಾರ ಕೊಡಲಿದ್ದೇವೆ. ಅಲ್ಲದೆ ಇಲ್ಲಿನ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಅಳವಡಿಸಲಾಗಿದ್ದ ಪೈಪೇ ಈ ದುರ್ಘಟನೆಗೆ ಕಾರಣವಾಗಿರಬಹುದು. ಆದ್ದರಿಂದ ಪೈಪು ತೆರವುಗೊಳಿಸುವಂತೆ ಸೂಕ್ತ ಕ್ರಮಕ್ಕೆ ಆದೇಶಿಸಿದ್ದೇನೆ ಎಂದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments