Webdunia - Bharat's app for daily news and videos

Install App

ಆ ಊರಿನವರಿಗೆ ದೇವರು ವರ ಕೊಟ್ರು, ಪೂಜಾರಿ ವರ ಕೊಡಲಿಲ್ಲ ಎಂಬಂತ ಪರಿಸ್ಥಿತಿ

Webdunia
ಶುಕ್ರವಾರ, 27 ಜುಲೈ 2018 (15:17 IST)
ದೇವರು ವರ ಕೊಟ್ರು ಪೂಜಾರಿ ಕೊಡ್ತಿಲ್ಲ ಎನ್ನುವಂತಾಗಿದೆ ಆ ಊರಿನ ಜನರ ಪರಿಸ್ಥಿತಿ. ಕುಗ್ರಾಮದ ಪರಿಸ್ಥಿತಿ ಏನು.. ಮುಂದೆ ಓದಿ…

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದ ನಿವಾಸಿಗಳ ಕಥೆ ಇದು. ಸರ್ಕಾರ 20 ಲಕ್ಷ ರೂಪಾಯಿ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನ ಸ್ಥಾಪಿಸಿದೆ. ಆದ್ರೆ ಗ್ರಾಮದಲ್ಲಿ ಜನರು ಕೊಳಕು ನೀರು ಸೇವನೆ ಮಾಡುವುದು ಮಾತ್ರ ತಪ್ಪಿಲ್ಲ. ಯಾಕಂದ್ರೆ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಆರ್. ಪ್ಲಾಂಟ್ ನಿರ್ಮಾಣವಾದ್ರು, ಅವುಗಳಿಗೆ ಚಾಲನೆ ಮಾತ್ರ ಸಿಕ್ಕಿಲ್ಲ.

ಕಳೆದ ನಾಲ್ಕು ತಿಂಗಳುಗಳಿಂದ ಸ್ಥಾಪನೆಯಾಗಬೇಕಿದ್ದ  ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪನೆಯಾಗದೇ ಜನಪ್ರತಿನಿಧಿಗಳ ತಿಕ್ಕಾಟಕ್ಕೆ ಶುದ್ದ ಕುಡಿಯುವ ನೀರಿನ ಘಟಕ ವರೆಗೂ ಆರಂಭಿಸಿಲ್ಲ. ಹೀಗಾಗಿ ಗ್ರಾಮಸ್ಥರು ಅನಿವಾರ್ಯವಾಗಿ ಅಶುದ್ಧ ನೀರನ್ನೆ ಕುಡಿದು ಬದುಕಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ. ಇದರಿಂದಾಗಿ ಗ್ರಾಮಸ್ಥರಲ್ಲಿ ಜ್ವರ, ಡೆಂಘ್ಯು, ಮಲೇರಿಯಾ ಸೇರಿದಂತೆ ಹತ್ತಾರು ರೋಗಗಳಿಂದ ಪೀಡಿತರಾಗಿದ್ದಾರೆ.

ಬಗ್ಗೆ ಗ್ರಾಮ ಪಂಚಾಯತಿ ಅಧಿಕಾರಿಗಳ ಗಮನಕ್ಕೆ ತಂದ್ರು ಪ್ರಯೋಜನವಾಗ್ತಿಲ್ಲ. ನಾಮಕಾವಾಸ್ತೆ ಎನ್ನುವಂತೆ ಘಟಕನಿರ್ಮಿಸಿ ಕೈತೊಳೆದುಕೊಂಡ ಅಧಿಕಾರಿಗಳು ವಿದ್ಯುತ್ ಸಂಪರ್ಕ ನೀಡದೆ ನಿರ್ಲಕ್ಷ್ಯತನ ಪ್ರದರ್ಶಿಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments