Webdunia - Bharat's app for daily news and videos

Install App

ಕುಸಿದ ಮೈತ್ರಿ ಸರಕಾರ: ಅಧಿಕಾರ ಗದ್ದುಗೆಯತ್ತ ಬಿಜೆಪಿ?

Webdunia
ಶನಿವಾರ, 6 ಜುಲೈ 2019 (19:29 IST)
ಜೆಡಿಎಸ್ – ಕಾಂಗ್ರೆಸ್ ನ ಶಾಸಕರು ರಾಜೀನಾಮೆ ನೀಡಿರುವ ಬೆನ್ನಲ್ಲೇ ಮೈತ್ರಿ ಸರಕಾರದ ಸಂಖ್ಯಾಬಲ ಕುಸಿತಗೊಂಡಿದೆ. ಈ ನಡುವೆ ಸರಕಾರ ರಚನೆಗ ಬಿಜೆಪಿ ದಾಪುಗಾಲು ಇಡುತ್ತಿದೆ.

ದೋಸ್ತಿ ಪಕ್ಷಗಳು ಅವರಾಗೇ ಕಚ್ಚಾಡಿಕೊಂಡೆ ಸರಕಾರ ಪತನವಾಗುತ್ತೆ. ನಾವೇನು ಸನ್ಯಾಸಿಗಳಲ್ಲ ಅಂತ ಬಿ.ಎಸ್.ಯಡಿಯೂರಪ್ಪ ಈ ಹಿಂದೆ ಹೇಳಿಕೆ ನೀಡಿದ್ರು. ಈಗ ಅದೇ ಮಾತನ್ನು ನಿಜ ಮಾಡುವಂತೆ ರಾಜ್ಯದ ಅಧಿಕಾರ ಚುಕ್ಕಾಣೆ ಹಿಡಿಯಲು ಬಿಜೆಪಿ ತೆರೆಮರೆಯಲ್ಲಿ ತೀವ್ರ ಕಸರತ್ತು ಮುಂದುವರಿಸಿದೆ.

ಸಿದ್ದರಾಮಯ್ಯ ವಿರುದ್ಧ ಶಾಸಕ ಹೆಚ್.ವಿಶ್ವನಾಥ್ ಆರೋಪಗಳ ಸುರಿಮಳೆಗೈದಿದ್ದಾರೆ. ಈ ನಡುವೆ ಸಿಎಂ ವಿರುದ್ಧ ಹಾಲಿ ಸಚಿವರೊಬ್ಬರೂ ತೆರೆಹಿಂದೆ ರಾಜೀನಾಮೆ ಕೊಡಿಸೋಕೆ ಕೈ ಜೋಡಿಸಿದ್ದಾರೆ ಎಂದು ಸುದ್ದಿ ಹರಿದಾಡುತ್ತಿದೆ.
ಈಗ ಮೈತ್ರಿ ಪಕ್ಷಗಳ ಶಾಸಕರು ರಾಜೀನಾಮೆ ನೀಡಿರೋದ್ರಿಂದ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರಕಾರ ಅಲ್ಪ ಸಂಖ್ಯಾಬಲಕ್ಕೆ ಕುಸಿತ ಕಂಡಿದೆ.

ದೋಸ್ತಿ ಪಕ್ಷಗಳು 105 ಹಾಗೂ ಬಿಜೆಪಿ 105 ಸಂಖ್ಯಾಬಲ ಹೊಂದಿವೆ. ಓರ್ವ ಬಿಎಸ್ಪಿ ಶಾಸಕ ಹಾಗೂ ಇಬ್ಬರು ಪಕ್ಷೇತರ ಶಾಸಕರಿದ್ದಾರೆ.

ಪಕ್ಷೇತರ ಅಥವಾ ಬಿಎಸ್ಪಿ ಶಾಸಕರನ್ನು ಸೆಳೆದು ಬಿಜೆಪಿ ಸರಕಾರ ರಚನೆ ಮಾಡೋಕೆ ಮುಂದಾಗುತ್ತೆ ಎನ್ನೋ ಲೆಕ್ಕಾಚಾರ ಕೇಳಿಬರಲಾರಂಭಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments