Webdunia - Bharat's app for daily news and videos

Install App

ಗನ್‌ ಮ್ಯಾನ್‌ ಕೈಗೆ ಶೂ ಕೊಟ್ಟು ದರ್ಪ ಮೆರೆದ ಕಾಂಗ್ರೆಸ್‌ ಶಾಸಕ

Webdunia
ಸೋಮವಾರ, 24 ಜೂನ್ 2019 (12:43 IST)
ಹುಬ್ಬಳ್ಳಿ : ಕಾಂಗ್ರೆಸ್‌ ಶಾಸಕರೊಬ್ಬರು ಗನ್‌ ಮ್ಯಾನ್‌ ಕೈಗೆ ತಮ್ಮ ಶೂವನ್ನು  ಕೊಟ್ಟು ದರ್ಪ ತೋರಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.



ನಿನ್ನೆ ಹುಬ್ಬಳ್ಳಿಯ ಮಂಟೂರು ರಸ್ತೆಯ ಅರಳಿಕಟ್ಟೆ ಓಣಿಯಲ್ಲಿ, ರಸ್ತೆ ಸಂಪೂರ್ಣವಾಗಿ ನೀರಿನಿಂದ ತುಂಬಿ ಹೋಗಿತ್ತು. ಅಂದು ಸಂಜೆ ಮಳೆಯಿಂದ ಹಾನಿಯಾದ ಪ್ರದೇಶದ ವೀಕ್ಷಣೆ ಗೆ ತೆರಳಿದ್ದ ಕಾಂಗ್ರೆಸ್‌ ಶಾಸಕ ಪ್ರಸಾದ್‌ ಅಬ್ಬಯ್ಯ ಅವರು  ತಮ್ಮ ಶೂ ಅನ್ನು ಗನ್‌ ಮ್ಯಾನ್‌ ಕೈಗೆ ನೀಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.


ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಪ್ರಸಾದ್‌ ಅಬ್ಬಯ್ಯ ಅವರು,  ಗನ್‌ ಮ್ಯಾನ್‌ ಕೈಗೆ ನಾನು ಶೂ ಕೊಟ್ಟಿಲ್ಲ. ಅವರೇ ಸಂತೋಷದಿಂದ ಆ ಕೆಲಸ ಮಾಡಿದ್ದಾರೆ. ಯಾರೋ ನನಗೆ ಆಗದವರು ನನ್ನ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸಲು ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments