Webdunia - Bharat's app for daily news and videos

Install App

ಸಾರ್ವಜನಿಕರನ್ನು ನಂಬಿಸಿ ಹಣ ವಸೂಲಿ ಮಾಡುತ್ತಿದ್ದ ದಂಪತಿ

Webdunia
ಶನಿವಾರ, 11 ಸೆಪ್ಟಂಬರ್ 2021 (21:08 IST)
ರೈಸ್ ಪುಲ್ಲಿಂಗ್ ವಸ್ತುಗಳನ್ನು ಮಾರಾಟ ಮಾಡಿ ಬಂದ ಹಣದಲ್ಲಿ ಪಾಲು ನೀಡುವುದಾಗಿ ಹೇಳಿ ಸಾರ್ವಜನಿಕರನ್ನು ನಂಬಿಸಿ ಹಣ ವಸೂಲಿ ಮಾಡುತ್ತಿದ್ದ ದಂಪತಿ ಸೇರಿ ಆರು ಮಂದಿಯನ್ನು ವೈಯಾಲಿಕಾವಲ್ ಠಾಣೆ ವ್ಯಾಪ್ತಿಯಲ್ಲಿ ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. 
ಆಂಧ್ರ ಮೂಲದ ದಂಪತಿ ಶೇಖ್ ಅಹ್ಮದ್, ಆತನ ಪತ್ನಿ ಜರೀನಾ ಅಹ್ಮದ್, ನಗರದ ರಾಘವೇಂದ್ರ ಪ್ರಸಾದ್, ನಯೀಮುಲ್ಲಾ, ಮುದಾಸೀರ್ ಅಹ್ಮದ್ ಮತ್ತು ಫರೀದಾ ಬಂಧಿತ ಆರೋಪಿಗಳು ಎಂದು ಪೆÇಲೀಸರು ತಿಳಿಸಿದರು. 
ದಂಪತಿ ಶೇಖ್ ಹಾಗೂ ಜರೀನಾ  ಸೇರಿದಂತೆ ಆರು ಮಂದಿ ಆರೋಪಿಗಳು ವೈಯಾಲಿಕಾವಲ್ ಪ್ರದೇಶದ ಹೋಟೆಲ್‍ವೊಂದರಲ್ಲಿ ಎರಡು ತಿಂಗಳಿನಿಂದ ವಾಸವಾಗಿದ್ದರು. ಹೊಟೇಲ್‍ನಲ್ಲಿದ್ದುಕೊಂಡೇ ಸಭೆ-ಸಮಾರಂಭ ನಡೆಸುತ್ತಿದ್ದ ಇವರಿಗೆ ಉಳಿದ ನಾಲ್ವರು ಜತೆಯಾಗಿದ್ದರು. ಸಭೆ ಸಮಾರಂಭಗಳಲ್ಲಿ ಅಮಾಯಕರನ್ನೇ ಗುರಿಯಾಗಿಸಿ ತಮ್ಮ ವಂಚನೆಯ ಬಲೆ ಬೀಸುತ್ತಿದ್ದ ಆರೋಪಿಗಳು ಬಳಿಕ ಅವರಿಂದ ಲಕ್ಷ ಲಕ್ಷ ರೂಪಾಯಿ ವಸೂಲಿ ಮಾಡಿ ಮೋಸ ಮಾಡುತ್ತಿದ್ದರು.
ಆರೋಪಿಗಳು ತಮ್ಮ ಬಳಿ ರೈಸ್ ಪುಲ್ಲಿಂಗ್ ವಸ್ತುಗಳು ಇರುವುದಾಗಿ ಸಾರ್ವಜನಿಕರ ಮನವೊಲಿಸಿ ನಂಬಿಸುತ್ತಿದ್ದರು. ಇಂತಹ ಸಿಡಿಲು ಹೊಡೆದ ಪಾತ್ರೆಗಳು (ರೈಸ್ ಪುಲ್ಲಿಂಗ್) ಅಕ್ಕಿ ಕಾಳುಗಳನ್ನು ಹಾಕಿ ಸೆಳೆಯುವ ಶಕ್ತಿ ಹೊಂದಿದೆ ಎಂದು ನಂಬಿಸುತ್ತಿದ್ದರು. ಇದನ್ನ ಮಾರಾಟ ಮಾಡಿದರೆ ಕೋಟ್ಯಂತರ ರೂಪಾಯಿ ಹಣ ಸಿಗುತ್ತದೆ. ಬಂದ ಹಣದಲ್ಲಿ ನಿಮಗೂ ಪಾಲು ನೀಡುವುದಾಗಿ ಹೇಳಿ ಸಾರ್ವಜನಿಕರಿಂದ ಹಣ ಪಡೆಯುತ್ತಿದ್ದರು. ಜನರನ್ನು ನಂಬಿಸುವ ಸಲುವಾಗಿ ಸಾಮಾಜಿಕ ಜಾಲತಾಣದಲ್ಲಿ ಕೆಲವು ಪೆÇೀಸ್ಟ್‍ಗಳನ್ನು ಹಾಕುತ್ತಿದ್ದರು. ಆರೋಪಿಗಳು ಹಣ ಪಡೆದ ಬಳಿಕ ಯಾವುದೇ ಪಾಲು ಹಣ ನೀಡದೆ ವಂಚಿಸುತ್ತಿದ್ದರು ಎಂದು ಪೆÇಲೀಸರು ತಿಳಿಸಿದರು. 
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಸಿಸಿಬಿ ಪೆÇಲೀಸರು, ಸಿಸಿಬಿ ಎಸಿಪಿ ಜಗನ್ನಾಥ ರೈ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ. ವೈಯಾಲಿಕಾವಲ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments