Webdunia - Bharat's app for daily news and videos

Install App

ಸಾರ್ವಜನಿಕರನ್ನು ನಂಬಿಸಿ ಹಣ ವಸೂಲಿ ಮಾಡುತ್ತಿದ್ದ ದಂಪತಿ

Webdunia
ಶನಿವಾರ, 11 ಸೆಪ್ಟಂಬರ್ 2021 (21:08 IST)
ರೈಸ್ ಪುಲ್ಲಿಂಗ್ ವಸ್ತುಗಳನ್ನು ಮಾರಾಟ ಮಾಡಿ ಬಂದ ಹಣದಲ್ಲಿ ಪಾಲು ನೀಡುವುದಾಗಿ ಹೇಳಿ ಸಾರ್ವಜನಿಕರನ್ನು ನಂಬಿಸಿ ಹಣ ವಸೂಲಿ ಮಾಡುತ್ತಿದ್ದ ದಂಪತಿ ಸೇರಿ ಆರು ಮಂದಿಯನ್ನು ವೈಯಾಲಿಕಾವಲ್ ಠಾಣೆ ವ್ಯಾಪ್ತಿಯಲ್ಲಿ ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. 
ಆಂಧ್ರ ಮೂಲದ ದಂಪತಿ ಶೇಖ್ ಅಹ್ಮದ್, ಆತನ ಪತ್ನಿ ಜರೀನಾ ಅಹ್ಮದ್, ನಗರದ ರಾಘವೇಂದ್ರ ಪ್ರಸಾದ್, ನಯೀಮುಲ್ಲಾ, ಮುದಾಸೀರ್ ಅಹ್ಮದ್ ಮತ್ತು ಫರೀದಾ ಬಂಧಿತ ಆರೋಪಿಗಳು ಎಂದು ಪೆÇಲೀಸರು ತಿಳಿಸಿದರು. 
ದಂಪತಿ ಶೇಖ್ ಹಾಗೂ ಜರೀನಾ  ಸೇರಿದಂತೆ ಆರು ಮಂದಿ ಆರೋಪಿಗಳು ವೈಯಾಲಿಕಾವಲ್ ಪ್ರದೇಶದ ಹೋಟೆಲ್‍ವೊಂದರಲ್ಲಿ ಎರಡು ತಿಂಗಳಿನಿಂದ ವಾಸವಾಗಿದ್ದರು. ಹೊಟೇಲ್‍ನಲ್ಲಿದ್ದುಕೊಂಡೇ ಸಭೆ-ಸಮಾರಂಭ ನಡೆಸುತ್ತಿದ್ದ ಇವರಿಗೆ ಉಳಿದ ನಾಲ್ವರು ಜತೆಯಾಗಿದ್ದರು. ಸಭೆ ಸಮಾರಂಭಗಳಲ್ಲಿ ಅಮಾಯಕರನ್ನೇ ಗುರಿಯಾಗಿಸಿ ತಮ್ಮ ವಂಚನೆಯ ಬಲೆ ಬೀಸುತ್ತಿದ್ದ ಆರೋಪಿಗಳು ಬಳಿಕ ಅವರಿಂದ ಲಕ್ಷ ಲಕ್ಷ ರೂಪಾಯಿ ವಸೂಲಿ ಮಾಡಿ ಮೋಸ ಮಾಡುತ್ತಿದ್ದರು.
ಆರೋಪಿಗಳು ತಮ್ಮ ಬಳಿ ರೈಸ್ ಪುಲ್ಲಿಂಗ್ ವಸ್ತುಗಳು ಇರುವುದಾಗಿ ಸಾರ್ವಜನಿಕರ ಮನವೊಲಿಸಿ ನಂಬಿಸುತ್ತಿದ್ದರು. ಇಂತಹ ಸಿಡಿಲು ಹೊಡೆದ ಪಾತ್ರೆಗಳು (ರೈಸ್ ಪುಲ್ಲಿಂಗ್) ಅಕ್ಕಿ ಕಾಳುಗಳನ್ನು ಹಾಕಿ ಸೆಳೆಯುವ ಶಕ್ತಿ ಹೊಂದಿದೆ ಎಂದು ನಂಬಿಸುತ್ತಿದ್ದರು. ಇದನ್ನ ಮಾರಾಟ ಮಾಡಿದರೆ ಕೋಟ್ಯಂತರ ರೂಪಾಯಿ ಹಣ ಸಿಗುತ್ತದೆ. ಬಂದ ಹಣದಲ್ಲಿ ನಿಮಗೂ ಪಾಲು ನೀಡುವುದಾಗಿ ಹೇಳಿ ಸಾರ್ವಜನಿಕರಿಂದ ಹಣ ಪಡೆಯುತ್ತಿದ್ದರು. ಜನರನ್ನು ನಂಬಿಸುವ ಸಲುವಾಗಿ ಸಾಮಾಜಿಕ ಜಾಲತಾಣದಲ್ಲಿ ಕೆಲವು ಪೆÇೀಸ್ಟ್‍ಗಳನ್ನು ಹಾಕುತ್ತಿದ್ದರು. ಆರೋಪಿಗಳು ಹಣ ಪಡೆದ ಬಳಿಕ ಯಾವುದೇ ಪಾಲು ಹಣ ನೀಡದೆ ವಂಚಿಸುತ್ತಿದ್ದರು ಎಂದು ಪೆÇಲೀಸರು ತಿಳಿಸಿದರು. 
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಸಿಸಿಬಿ ಪೆÇಲೀಸರು, ಸಿಸಿಬಿ ಎಸಿಪಿ ಜಗನ್ನಾಥ ರೈ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ. ವೈಯಾಲಿಕಾವಲ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಧರ್ಮಸ್ಥಳ: ಮೊದಲು ಅನಾಮಿಕನ ಗುರುತು ಬಹಿರಂಗಪಡಿಸಲಿ, ಅಶೋಕ್ ಒತ್ತಾಯ

ಮುಂದಿನ ಸುದ್ದಿ
Show comments