Webdunia - Bharat's app for daily news and videos

Install App

ಪ್ರೇಯಸಿಯನ್ನು ಕೊಂದು ಕಬ್ಬಿನ ಗದ್ದೆಗೆ ಹೂತು ಹಾಕಿದ ಪಾಗಲ್ ಪ್ರೇಮಿ!

Webdunia
ಬುಧವಾರ, 14 ಡಿಸೆಂಬರ್ 2022 (13:13 IST)
ಹಾಸನ : ಪ್ರೇಯಸಿಯ ಶವವನ್ನು ಯಾರಿಗೂ ತಿಳಿಯದಂತೆ ಪ್ರೀಯಕರನೇ ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿರುವ ಘಟನೆ ಹೊಳೆನರಸೀಪುರ ತಾಲೂಕಿನ, ಪಾರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
 
ಕಾವ್ಯ (25) ಮೃತಪಟ್ಟ ಯುವತಿಯಾಗಿದ್ದು, ಆಕೆಯನ್ನು ಕೊಲೆ ಮಾಡಿ ಹೂತು ಹಾಕಿದ್ದಾನೆ ಎಂದು ಪ್ರಿಯಕರ ಅವಿನಾಶ್ ವಿರುದ್ಧ ಕಾವ್ಯ ಪೋಷಕರು ಆರೋಪಿಸಿದ್ದಾರೆ.

ಅರಕಲಗೂಡು ತಾಲೂಕಿನ, ಮುದ್ಲಾಪುರ ಗ್ರಾಮದ ಕಲ್ಪನಾ ಅವರ ಪುತ್ರಿ ಕಾವ್ಯ ಒಂದುವರೆ ವರ್ಷವಿರುವಾಗಲೇ ತಂದೆಯನ್ನು ಕಳೆದುಕೊಂಡಿದ್ದಳು. ನಂತರ ದೊಡ್ಡಮ್ಮನ ಮನೆಯಲ್ಲಿ ಇದ್ದುಕೊಂಡು ವಿದ್ಯಾಭ್ಯಾಸ ಮಾಡಿದ್ದಳು. ಬಿಬಿಎಂ ಓದಿದ್ದ ಕಾವ್ಯ ಅಕ್ಷಯ್ನನ್ನು ಪ್ರೀತಿಸಿ ವಿವಾಹವಾಗಿದ್ದಳು.

ಈ ವಿಷಯವನ್ನು ತಾಯಿಯ ಬಳಿವೂ ಹೇಳಿರಲಿಲ್ಲ. ಮದುವೆಯಾದ ಕೆಲವೇ ತಿಂಗಳಲ್ಲಿ ಸಂಸಾರದಲ್ಲಿ ಹೊಂದಾಣಿಕೆ ಬಾರದ ಕಾರಣ ಪೊಲೀಸ್ ಠಾಣೆಗೆ ದೂರು ನೀಡಿ ಅಕ್ಷಯ್ ಜೊತೆ ವಿವಾಹ ಸಂಬಂಧ ಮುರಿದುಕೊಂಡಿದ್ದಳು. ಈ ವಿಚಾರವನ್ನು ಕೂಡ ತನ್ನ ತಾಯಿಯಿಂದ ಮುಚ್ಚಿಟ್ಟಿದ್ದಳು. ನಂತರ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದಳು.

ಬೆಂಗಳೂರಿನಲ್ಲಿ ಕೆಲ ತಿಂಗಳುಗಳ ಕಾಲ ಕೆಲಸ ಮಾಡಿದ ಕಾವ್ಯ ನಂತರ ಹಾಸನಕ್ಕೆ ವಾಪಾಸಾಗಿದ್ದಳು. ಬಳಿಕ ಹೊಳೆನರಸೀಪುರ ತಾಲೂಕಿನ, ಪಾರಸನಹಳ್ಳಿ ಗ್ರಾಮದ ಅವಿನಾಶ್ನನ್ನು ಪ್ರೀತಿಸುತ್ತಿದ್ದಳು. ಕಳೆದ 2 ವರ್ಷಗಳಿಂದ ಅವಿನಾಶ್ ಮನೆಯಲ್ಲಿಯೇ ವಾಸವಿದ್ದ ಕಾವ್ಯ ತಾಯಿಯ ಬಳಿ ಬೆಂಗಳೂರಿನಲ್ಲೇ ಇರುವುದಾಗಿ ಹೇಳಿದ್ದಳು.

ಕಾವ್ಯ ಕಳೆದ 1 ತಿಂಗಳಿನಿಂದ ತಾಯಿಗೆ ಫೋನ್ ಮಾಡದೇ ವಾಯ್ಸ್ ಮೆಸೇಜ್ ಕಳುಹಿಸುತ್ತಿದ್ದಳು. ಮೊಬೈಲ್, ಲ್ಯಾಪ್ಟ್ಯಾಪ್ ತೆಗೆದುಕೊಳ್ಳಬೇಕೆಂದು 25 ಸಾವಿರ ಹಣವನ್ನು ಹಾಕಿಸಿಕೊಂಡಿದ್ದಳು. ಕಳೆದ 20 ದಿನಗಳಿಂದ ಕಾವ್ಯ ತನ್ನ ತಾಯಿಗೆ ಫೋನ್ ಮಾಡಿರಲಿಲ್ಲ.

ಅವಳ ಫೋನ್ ಕೂಡಾ ಸ್ವಿಚ್ ಆಫ್ ಆಗಿತ್ತು. ಇದರಿಂದ ಕಾವ್ಯಳ ತಾಯಿ ಆತಂಕಗೊಂಡಿದ್ದರು. ನಂತರ ಕಲ್ಪನಾ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬರು ಫೋನ್ ಮಾಡಿ, ನಿಮ್ಮ ಮಗಳನ್ನು ಹೂತು ಹಾಕಿದ್ದಾರೆ ಎಂದು ಗ್ರಾಮದಲ್ಲಿ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದರು.

ಇದಾದ ಬಳಿಕ ಮಗಳು ಕಾಣೆಯಾಗಿರುವ ಬಗ್ಗೆ ಕಲ್ಪನಾ ಹೊಳೆನರಸೀಪುರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅವಿನಾಶ್ನನ್ನು ವಶಕ್ಕೆ ಪಡೆದು ತನಿಖೆ ನಡೆಸಿದಾಗ ಕಾವ್ಯಳ ಶವವನ್ನು ಕಬ್ಬಿನಗದ್ದೆಯಲ್ಲಿ ಹೂತು ಹಾಕಿರುವುದು ಬೆಳಕಿಗೆ ಬಂದಿದೆ. ಅವಿನಾಶ್ ಹಾಗೂ ಆತನ ಪೋಷಕರೇ ನನ್ನ ಮಗಳನ್ನು ಕೊಲೆ ಮಾಡಿ ಹೂತು ಹಾಕಿದ್ದಾರೆ ಎಂದು ಕಲ್ಪನಾ ಆರೋಪಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಮುಂದಿನ ಸುದ್ದಿ
Show comments