ಕಳೆದ‌ ಒಂದು ತಿಂಗಳ ಹಿಂದೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Webdunia
ಮಂಗಳವಾರ, 11 ಏಪ್ರಿಲ್ 2023 (19:09 IST)
ಕಳೆದ‌ ಒಂದು ತಿಂಗಳ ಹಿಂದೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿ ಅನುಮಾನಾಸ್ಪಾದ ಸಾವು‌ ಪ್ರಕರಣ ದಾಖಲಿಸಿಕೊಂಡಿದ್ದ ರಾಮಮೂರ್ತಿನಗರ ಪೊಲೀಸರು ತನಿಖೆ ಇದೊಂದು ಕೊಲೆಯೆಂದು ಕಂಡುಕೊಂಡಿದ್ದು ಈ ಸಂಬಂಧ ಮೂವರನ್ನು ಆರೋಪಿಗಳನ್ನು ಸೆರೆಹಿಡಿದಿದ್ದಾರೆ.
 
ಮೃತ ಸೆಫುಲ್ಲಾ ಎಂಬಾತನನ್ನ ಕೊಲೆಮಾಡಿದ ಆರೋಪದಡಿ ಪ್ರಶಾಂತ್, ಜಬಿ ಹಾಗೂ ಶಾಬಾಜ್ ಎಂಬುವರನ್ನು ಬಂಧಿಸಲಾಗಿದೆ. ರಾಮಮೂರ್ತಿನಗರದ ಸಾದಹಳ್ಳಿ ಬಳಿಯ  ಚರಂಡಿಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು‌. ಪರಿಶೀಲನೆ ನಡೆಸಿ ಶವವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಅನುಮಾನಸ್ಪಾದ ಸಾವು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಮೃತನ ವಿವರ ಹಾಗೂ ಕೃತ್ಯಕ್ಕೆ ಕಾರಣ ಬಗ್ಗೆ ನಿರಂತರ ತನಿಖೆ ನಡೆಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ.‌ ಅಲ್ಲದೆ ಮೃತನ ಗುರುತು ಎಲ್ಲಾ ಪೊಲೀಸ್ ಠಾಣೆಗಳಿಗೂ ಕಳುಹಿಸಲಾಗಿತ್ತು.  ಈ ನಡುವೆ ತನ್ನ ಮಗ ಕಾಣೆಯಾಗಿದ್ದಾನೆ ಎಂದು ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದಳು. ಮಾಹಿತಿ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಮಗ ಸೆಫುಲ್ಲಾ ಈ ಹಿಂದೆ ಕಳ್ಳತನ ಮಾಡಿದ ಬಗ್ಗೆ ಪ್ರಶಾಂತ್ ಹಾಗೂ ಆತನ ಸಹಚರರು ಕೂಡಿಹಾಕಿ ಹಲ್ಲೆ ನಡೆಸಿದ್ದರು ಎಂದು ಸುಳಿವು ನೀಡಿದ್ದರು. ಕೂಡಲೇ ಪ್ರಶಾಂತ್ ನನ್ನ ತೀವ್ರ ವಿಚಾರಣೆ ನಡೆಸಿದಾಗ ಕೊಲೆ ಸತ್ಯ ಬಾಯ್ಬಿಟ್ಟಿದ್ದಾನೆ‌. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಥರೈಟಿಸ್ ಬರದಂತೆ ತಡೆಯಲು ಈ ಮೂರು ಕೆಲಸ ತಪ್ಪದೇ ಮಾಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕನ್ನಡಕ್ಕಿಂತ ಪರಭಾಷೆಗಳಲ್ಲೇ ಇರುವ ಪ್ರಕಾಶ್ ರಾಜ್ ಗೆ ಯಾಕೆ ರಾಜ್ಯೋತ್ಸವ ಪ್ರಶಸ್ತಿ: ನೆಟ್ಟಿಗರ ತರಾಟೆ

ಮುಟ್ಟಾಗಿದ್ದು ನಿಜಾನಾ ಎಂದು ಮಹಿಳೆಯರ ಬಟ್ಟೆ ಬಿಚ್ಚಲು ಹೇಳಿದ ಮೇಲ್ವಿಚಾರಕ

ಕೋರ್ಟ್ ಹೇಳಿದ್ರೂ ಬೆಲೆಯಿಲ್ವಾ: ಪ್ರಿಯಾಂಕ್ ಖರ್ಗೆ ವಿರುದ್ಧ ನೆಟ್ಟಿಗರು ಕಿಡಿ

ಮುಂದಿನ ಸುದ್ದಿ
Show comments