Webdunia - Bharat's app for daily news and videos

Install App

ಕಳೆದ‌ ಒಂದು ತಿಂಗಳ ಹಿಂದೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Webdunia
ಮಂಗಳವಾರ, 11 ಏಪ್ರಿಲ್ 2023 (19:09 IST)
ಕಳೆದ‌ ಒಂದು ತಿಂಗಳ ಹಿಂದೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿ ಅನುಮಾನಾಸ್ಪಾದ ಸಾವು‌ ಪ್ರಕರಣ ದಾಖಲಿಸಿಕೊಂಡಿದ್ದ ರಾಮಮೂರ್ತಿನಗರ ಪೊಲೀಸರು ತನಿಖೆ ಇದೊಂದು ಕೊಲೆಯೆಂದು ಕಂಡುಕೊಂಡಿದ್ದು ಈ ಸಂಬಂಧ ಮೂವರನ್ನು ಆರೋಪಿಗಳನ್ನು ಸೆರೆಹಿಡಿದಿದ್ದಾರೆ.
 
ಮೃತ ಸೆಫುಲ್ಲಾ ಎಂಬಾತನನ್ನ ಕೊಲೆಮಾಡಿದ ಆರೋಪದಡಿ ಪ್ರಶಾಂತ್, ಜಬಿ ಹಾಗೂ ಶಾಬಾಜ್ ಎಂಬುವರನ್ನು ಬಂಧಿಸಲಾಗಿದೆ. ರಾಮಮೂರ್ತಿನಗರದ ಸಾದಹಳ್ಳಿ ಬಳಿಯ  ಚರಂಡಿಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು‌. ಪರಿಶೀಲನೆ ನಡೆಸಿ ಶವವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಅನುಮಾನಸ್ಪಾದ ಸಾವು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಮೃತನ ವಿವರ ಹಾಗೂ ಕೃತ್ಯಕ್ಕೆ ಕಾರಣ ಬಗ್ಗೆ ನಿರಂತರ ತನಿಖೆ ನಡೆಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ.‌ ಅಲ್ಲದೆ ಮೃತನ ಗುರುತು ಎಲ್ಲಾ ಪೊಲೀಸ್ ಠಾಣೆಗಳಿಗೂ ಕಳುಹಿಸಲಾಗಿತ್ತು.  ಈ ನಡುವೆ ತನ್ನ ಮಗ ಕಾಣೆಯಾಗಿದ್ದಾನೆ ಎಂದು ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದಳು. ಮಾಹಿತಿ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಮಗ ಸೆಫುಲ್ಲಾ ಈ ಹಿಂದೆ ಕಳ್ಳತನ ಮಾಡಿದ ಬಗ್ಗೆ ಪ್ರಶಾಂತ್ ಹಾಗೂ ಆತನ ಸಹಚರರು ಕೂಡಿಹಾಕಿ ಹಲ್ಲೆ ನಡೆಸಿದ್ದರು ಎಂದು ಸುಳಿವು ನೀಡಿದ್ದರು. ಕೂಡಲೇ ಪ್ರಶಾಂತ್ ನನ್ನ ತೀವ್ರ ವಿಚಾರಣೆ ನಡೆಸಿದಾಗ ಕೊಲೆ ಸತ್ಯ ಬಾಯ್ಬಿಟ್ಟಿದ್ದಾನೆ‌. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments